ಕೋಟೇಶ್ವರ, ಅ.24: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಕೋಟೇಶ್ವರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಹಾಗು 2 ವತಿಯಿಂದ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಒಂದು ದಿನದ ಶಿಬಿರವನ್ನು ಆಯೋಜಿಸಿದ್ದು ಸುಮಾರು 100 ವಿದ್ಯಾರ್ಥಿ ಸ್ವಯಂಸೇವಕರು ದೇವಸ್ಥಾನದ ಆವರಣ ಹಾಗೂ ದೇವಸ್ಥಾನದ ಕೆರೆಯ ಕಟ್ಟೆಗಳನ್ನು ಸ್ವಚ್ಛಗೊಳಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ನಿರಂಜನ್ ಶರ್ಮ, ವಾಣಿಜ್ಯಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕಿ ವಿದ್ಯಾ ಹಾಗೂ ಭೌತಶಾಸ್ತ್ರ ಸಹಾಯಕ ಪ್ರಾಧ್ಯಾಪಕ ರಂಜಿತ್ ಶಿಬಿರದಲ್ಲಿ ಉಪಸ್ಥಿತರಿದ್ದರು. ಏಕ ಬಳಕೆಯ ಪ್ಲಾಸ್ಟಿಕ್ ಬಳಸದಿರುವಂತೆ ಜಾಗೃತಿ ಮೂಡಿಸುವ ಸಲುವಾಗಿ ಜಾಥ ನಡೆಯಿತು.




By
ForthFocus™