Saturday, February 7, 2026
Saturday, February 7, 2026

ಮರವಂತೆ: ಕ್ಯಾನ್ಸರ್ ತಪಾಸಣಾ ಶಿಬಿರ

ಮರವಂತೆ: ಕ್ಯಾನ್ಸರ್ ತಪಾಸಣಾ ಶಿಬಿರ

Date:

ಬೈಂದೂರು, ಅ.27: ಸಾಧನಾ ಸಮಾಜ ಸೇವಾ ವೇದಿಕೆ (ರಿ.) ಮರವಂತೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಹಾಗೂ ಗ್ರಾಮ ಪಂಚಾಯತ್, ಮರವಂತೆ ಇವರ ಸಹಭಾಗಿತ್ವದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಶಿಬಿರವನ್ನು ಸಾಧನಾ ಸಮಾಜ ಸೇವಾ ಸಂಘ (ರಿ.) ಮರವಂತೆ ಇದರ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ಅವರು ನೆರವೇರಿಸಿದರು. ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಕೆ. ಗಣೇಶ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಮರವಂತೆ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ನಾಗರಾಜ ಪಟಗಾರ ಶುಭ ಹಾರೈಸಿದರು. ಕೆ.ಎಂ.ಸಿ. ಮಣಿಪಾಲದ ಸ್ತ್ರೀ ರೋಗ ವಿಭಾಗದ ಡಾ. ಅವಿಷಾ ಮತ್ತು ಡಾ. ಅನುಷಾ ಉಪಸ್ಥಿತರಿದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಸಮುದಾಯ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು, ಸಾಧನಾ ವೇದಿಕೆಯ ಸದಸ್ಯರು, ಸ್ಥಳೀಯ ಸ್ತ್ರೀ ಶಕ್ತಿ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮರವಂತೆ ಒಕ್ಕೂಟದ ಪದಾಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಶಿಬಿರದಲ್ಲಿ 175 ಕ್ಕೂ ಹೆಚ್ಚು ಜನರು ಪ್ರಯೋಜನವನ್ನು ಪಡೆದುಕೊಂಡರು.

ಹರೀಶ್ ಗೌಡ ಸ್ವಾಗತಿಸಿ, ದೇವಿದಾಸ್ ಶ್ಯಾನುಭಾಗ್ ವಂದಿಸಿದರು. ಭಾಗ್ಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!