Monday, February 24, 2025
Monday, February 24, 2025

ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು: ಪಿ.ಜಿ. ಆರ್ ಸಿಂಧ್ಯಾ

ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು: ಪಿ.ಜಿ. ಆರ್ ಸಿಂಧ್ಯಾ

Date:

ಉಡುಪಿ: ಭವ್ಯ ಭಾರತದ ಆಸ್ತಿಗಳಾದ ವಿದ್ಯಾರ್ಥಿಗಳಿಗೆ ದೇಶಪ್ರೇಮ ಪ್ರಕೃತಿ ಪ್ರೇಮ ಮತ್ತೆ ದಿಟ್ಟ ನಾಯಕತ್ವವನ್ನು ಮೂಡಿಸುವಲ್ಲಿ ಪ್ರತಿಯೊಬ್ಬ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ವಿದ್ಯಾರ್ಥಿಗಳಿಗೆ ಮೈಗೂಡಿಸುವಲ್ಲಿ ಸಹಕರಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಪಿ.ಜಿ. ಆರ್ ಸಿಂಧ್ಯಾ ಹೇಳಿದರು.

ಅವರು ನಗರದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಭಾರತ ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲೆಯ ಶೈಕ್ಷಣಿಕ ವಲಯದ ಬಿ.ಇ.ಒ, ಟಿ.ಪಿ.ಇ.ಓ, ಬಿ.ಆರ್.ಪಿ ಮತ್ತು ಸಿ.ಆರ್.ಪಿ ಗಳಿಗೆ ನಡೆದ ಒಂದು ದಿನದ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಭಾರತ ಜಗತ್ತಿಗೆ ಆದರ್ಶವಾಗಿ ಇತರ ದೇಶಗಳ ಕಷ್ಟ ಸಮಯದಲ್ಲಿ ಸ್ಪಂದಿಸಿ ಸೇವಾ ಮನೋಭಾವನೆಯಿಂದ ಕರ್ತವ್ಯ ಮಾಡುವ ಸದ್ಗುಣಗಳನ್ನು ಹಾಗೂ ಪರರಿಗೆ ಸಹಾಯ ಮಾಡುವ ಹೃದಯವಂತಿಕೆಯನ್ನು ಮೂಡಿಸುವ ಉದ್ದೇಶವನ್ನು ಸ್ಕೌಟ್ಸ್ ಗೈಡ್ಸ್ ಸಂಸ್ಥೆಯು ಹೊಂದಿದೆ ಎಂದ ಅವರು ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮವಾಗಿದ್ದು, ವಿಶೇಷವಾಗಿ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಅಪ್ರತಿಮ ಸಾಧನೆಯನ್ನು ಮಾಡಿರುವುದು ತುಂಬಾ ಸಂತೋಷ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗೋವಿಂದ ಮಡಿವಾಳ ಮಾತನಾಡಿ, ಶೈಕ್ಷಣಿಕವಾಗಿ ಜ್ಞಾನವನ್ನು ಗಳಿಸುವ ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಹಾಗೂ ದೇಶಸೇವೆ ಮನೋಭಾವನೆಯನ್ನು ಬೆಳೆಸಿಕೊಂಡು ಸತ್ಪ್ರಜೆಯಾಗಿ ಬಾಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್, ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ ಜೆ ಪೈ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಅಶೋಕ್ ಕಾಮತ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮುಂದಿನಮನಿ, ಉಡುಪಿ ದೈಹಿಕ ಶಿಕ್ಷಣ ಅಧಿಕಾರಿ ಸೀನ್ ರಘುನಾಥ್, ಉಡುಪಿ ಜಿಲ್ಲಾ ಸಂಸ್ಥೆ ಕಾರ್ಯದರ್ಶಿ ಕೊಗ್ಗ ಗಾಣಿಗ, ಸಾವಿತ್ರಿ ಮನೋಹರ್, ಜಿಲ್ಲಾ ಸಂಸ್ಥೆ ಉಪಾಧ್ಯಕ್ಷ ಎಡ್ವಿನ್ ಆಳ್ವ, ಸಮಾಜ ಕಲ್ಯಾಣ ಇಲಾಖೆಯ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಸ್ಕೌಟ್ ಆಯುಕ್ತ ಡಾ. ವಿಜಯೇಂದ್ರ ವಸಂತರಾವ್ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ವಂದಿಸಿದರು. ಕಾರ್ಕಳ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಗಣೇಶ್ ಜಾಲ್ಸೂರು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!