Monday, February 24, 2025
Monday, February 24, 2025

ಕೊಕ್ಕರ್ಣೆ: ಇಮ್ಮಡಿ‌ ದೇವರಾಯನ‌ ಅಪ್ರಕಟಿತ ಶಾಸನ

ಕೊಕ್ಕರ್ಣೆ: ಇಮ್ಮಡಿ‌ ದೇವರಾಯನ‌ ಅಪ್ರಕಟಿತ ಶಾಸನ

Date:

ಬ್ರಹ್ಮಾವರ: ಕೊಕ್ಕರ್ಣೆಯ‌‌ ಪೆಜಮಂಗೂರು ಗ್ರಾಮದ ಚಗ್ರಿಬೆಟ್ಟು ಪ್ರದೇಶದಲ್ಲಿ ಸೇತುವೆ ಕಾಮಗಾರಿಯ ವೇಳೆ‌ ಶಾಸನವೊಂದು ಪತ್ತೆಯಾಗಿದ್ದರ‌ ಬಗ್ಗೆ ಕೊಕ್ಕರ್ಣೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮೀ ಅವರು ಮಾಹಿತಿ‌ ನೀಡಿದ್ದು, ರಾಷ್ಟ್ರಕವಿ ಗೋವಿಂದ ‌ಪೈ ಸಂಶೋಧನ ಕೇಂದ್ರ – ಉಡುಪಿ ಇದರ ಆಡಳಿತಾಧಿಕಾರಿ ಡಾ. ಬಿ.ಜಗದೀಶ ಶೆಟ್ಟಿಯವರ ನೇತೃತ್ವದಲ್ಲಿ ‌ಈ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ‌ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ‌ಅವರು ಅಧ್ಯಯನ ‌ನಡೆಸಿರುತ್ತಾರೆ.‌

ಕಣ (ಗ್ರಾನೈಟ್) ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನದ ಕೆಳಭಾಗವು ತುಂಡಾಗಿದ್ದು ಪ್ರಸ್ತುತ ತುಂಡಾದ ಶಾಸನವು 2 ಅಡಿ‌ ಎತ್ತರ ಮತ್ತು 2 ಅಡಿ ಅಗಲವನ್ನು ಹೊಂದಿದೆ. 16 ಸಾಲುಗಳನ್ನು ಹೊಂದಿರುವ ಶಾಸನವು ಕನ್ನಡ ‌ಲಿಪಿ‌ ಮತ್ತು ಭಾಷೆಯಲ್ಲಿದ್ದು, ಮೇಲ್ಭಾಗದಲ್ಲಿ ಶಿವಲಿಂಗ,‌ ಇಕ್ಕೆಲಗಳಲ್ಲಿ ದೀಪಕಂಬ‌,‌ ನಂದಿ‌ ಮತ್ತು ಸೂರ್ಯ-ಚಂದ್ರರ‌ ಉಬ್ಬು ಕೆತ್ತನೆಯಿದೆ.

“ಶ್ರೀ ಗಣಾಧಿಪತಯೆ ನಮ” ಎಂಬ ಶ್ಲೋಕದಿಂದ ಪ್ರಾರಂಭವಾಗುವ ಈ ಶಾಸನವು ಇಮ್ಮಡಿ ದೇವರಾಯನ ಕಾಲಕ್ಕೆ ಸೇರಿದ್ದು, ಕಾಲಮಾನವು ಶಕವರುಷ 1364 ದುಂದುಭಿ ಸಂವತ್ಸರ ಎಂದಿದೆ. ಅಂದರೆ ಈ ಕಾಲಮಾನವು ಕ್ರಿ.‌ಶ 1442ಕ್ಕೆ‌ ಸರಿ ಹೊಂದುತ್ತದೆ.

ಈ ಕಾಲದಲ್ಲಿ ಬಾರಕೂರ ರಾಜ್ಯವನ್ನು ಇಮ್ಮಡಿ‌ ದೇವರಾಯನ‌ ನಿರೂಪದಿಂದ ಮಹಾಪ್ರಧಾನ ಚಂಡರಸ ಒಡೆಯನು‌ ಆಳ್ವಿಕೆ ಮಾಡುತ್ತಿದ್ದ. ಉಳಿದಂತೆ‌ ಶಾಸನದಲ್ಲಿ ಬೊಂಮಣ, ಗೋವಿಂದ ಸೆಟಿ,‌ ಶಂಕರ ನಾರಾಯಣ, ಕುದು (ಪ್ರಸ್ತುತ ಕುದಿ ಗ್ರಾಮ ಆಗಿರಬಹುದು) ಎಂಬ ಹೆಸರುಗಳ ಉಲ್ಲೇಖ ಕಂಡು ಬರುತ್ತದೆ.

ಈ ಶಾಸನವು ಶಂಕರ ನಾರಾಯಣ ದೇವರಿಗೆ ಕೊಟ್ಟಿರಬಹುದಾದ ದಾನ ಶಾಸನವಾಗಿರಬಹುದೆಂದು ಡಾ.‌ ಬಿ.ಜಗದೀಶ ಶೆಟ್ಟಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‌ಪ್ರಸ್ತುತ ಈ ಶಾಸನವನ್ನು ಚಗ್ರಿಬೆಟ್ಟು ಪ್ರದೇಶದಿಂದ ರಾಷ್ಟ್ರಕವಿ ಸಂಶೋಧನ ಕೇಂದ್ರ-ಉಡುಪಿಗೆ‌ ರಕ್ಷಣಾ ‌ದೃಷ್ಟಿಯಿಂದ ರವಾನಿಸಲಾಗಿದೆ. ಕ್ಷೇತ್ರಕಾರ್ಯ ಶೋಧನೆಯಲ್ಲಿ ಲಕ್ಷ್ಮೀ, ರಾಘವೇಂದ್ರ ಕೊಡ್ಲಯ ಹಾಗೂ ನಾಗೇಶ್ ನಾಯಕ್ ಸಹಕಾರ ನೀಡಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!