Tuesday, April 28, 2026
Tuesday, April 28, 2026

ದಿ.ಸಾಲುಮರದ ತಿಮ್ಮಕ್ಕಗೆ ನುಡಿ ನಮನ

ದಿ.ಸಾಲುಮರದ ತಿಮ್ಮಕ್ಕಗೆ ನುಡಿ ನಮನ

Date:

ಉಡುಪಿ, ನ.15: ಶುಕ್ರವಾರ ಇಹಲೋಕ ತ್ಯಜಿಸಿದ ವೃಕ್ಷ ಮಾತೆ ಪದ್ಮಶ್ರೀ ಸಾಲುಮರ ತಿಮ್ಮಕ್ಕ ಅವರಿಗೆ ನುಡಿ ನಮನ ಕಾರ್ಯಕ್ರಮ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು​ ಘಟಕ ಇದರ ವತಿಯಿಂದ ಉಡುಪಿ ಇನ್ ನಲ್ಲಿ ಶನಿವಾರ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ಉರಗತಜ್ಞ ಗುರುರಾಜ್ ಸನಿಲ್ ದಿವಂಗತ ಸಾಲುಮರ ತಿಮ್ಮಕ್ಕರವರು ಯಾವುದೇ ರೀತಿಯ ಪ್ರತಿಫ​ಲಾಪೇಕ್ಷೆ ಇಲ್ಲದೆ ಪರಿಸರದ ಮೇಲಿನ ಅಪಾರ ಪ್ರೀತಿಯನ್ನು ಹೊಂದಿ ನೂರಾರು ಗಿಡಗಳನ್ನು ನೆಟ್ಟು ಘೋಷಣೆ ಮಾಡಿದ್ದರು​. ಅದನ್ನು ನೋಡಿ ವಿಶ್ವದಾದ್ಯಂತ ಪರಿಸರದ ಬಗ್ಗೆ ಅಭಿಯಾನಗಳು ನಡೆಯಲು ಸಾಧ್ಯವಾಯಿತು ಎಂದರು.

ನಿರೂಪಕ ಅವಿನಾಶ್ ಕಾಮತ್ ಮಾತನಾಡಿ ತಿಮ್ಮಕ್ಕ ಅಜ್ಜಿ ಮತ್ತು ಉಡುಪಿಗೆ ಅವಿನಾಭಾವ ಸಂಬಂಧವಿದೆ ಇಂದು ಅಜ್ಜಿ ವಿಶ್ವದಾದ್ಯಂತ ಪ್ರಸಿದ್ಧಿ ಪಡೆಯಲು ಉಡುಪಿಯ ಜನತೆಯ ಸಹಕಾರವು ಇತ್ತು ಎಂದು ನೆನಪು ಮಾಡಿದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಮಾತನಾಡಿ ಸಾಲುಮರ ತಿಮ್ಮಕ್ಕರವರ ಹೆಸರಿನಲ್ಲಿ ಪ್ರತಿವರ್ಷ ಖ್ಯಾತ ವ್ಯಕ್ತಿಗಳನ್ನು ಉಡುಪಿಗೆ ಕರೆಸಿ ಅವರಿಂದ ಉಡುಪಿಯ ಪ್ರಮುಖವಾದ ಸ್ಥಳಗಳಲ್ಲಿ ಅರಳಿ ಮರವನ್ನು ನೆಟ್ಟು ಅವರನ್ನು ಗೌರವಿಸುವ ಕಾರ್ಯ ಮಾಡಲಾಗುವುದು ಎಂದರು.

ಸುಹಾಸಂನ ಶ್ರೀನಿವಾಸ್​ ಉಪಾಧ್ಯ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಶಂಕರ್ ಮಾತನಾಡಿದರು​. ಉಡುಪಿ ಇನ್ ನ ಮುಖ್ಯಸ್ಥ ನಾಗರಾಜ ಹೆಬ್ಬಾರ್, ಹಾಸ್ಯ ಭಾಷಣಕಾರ್ತಿ ಸಂಧ್ಯಾ ಶೆಣೈ, ​ಜಿಲ್ಲಾ ಕಸಾಪ ​ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್,​ ಪದಾಧಿಕಾರಿಗಳಾದ ದೀಪಾ ಚಂದ್ರಕಾಂತ್, ರಂಜನಿ ವಸಂತ್, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಶಶಿಕಾಂತ ಶೆಟ್ಟಿ, ಲಕ್ಷ್ಮಿಕಾಂತ್, ರಾಜೇಶ್​, ರಾಮಾಂಜಿ​ ಮುಂತಾದ​ವರು ಉಪ​ಸ್ಥಿತರಿದ್ದರು​.

ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಪ್ರಸ್ತಾವನೆಗೈದರು.​ ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಸ್ವಾಗತಿಸಿದರು. ಗೌ.ಕಾರ್ಯದರ್ಶಿ ಜನಾದ೯ನ್‌ ಕೊಡವೂರು ನಿರೂಪಿಸಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.​ ಈ ಸಂದರ್ಭದಲ್ಲಿ ಸಾಲುಮರ ತಿಮ್ಮಕ್ಕ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!