Friday, April 24, 2026
Friday, April 24, 2026

ಪಲಿಮಾರು ಸರಕಾರಿ ಪದವಿಪೂರ್ವ ಕಾಲೇಜು: ವಿವೇಕ ಕೊಠಡಿ ಉದ್ಘಾಟನೆ

ಪಲಿಮಾರು ಸರಕಾರಿ ಪದವಿಪೂರ್ವ ಕಾಲೇಜು: ವಿವೇಕ ಕೊಠಡಿ ಉದ್ಘಾಟನೆ

Date:

ಕಾಪು, ನ.16: ಪಲಿಮಾರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಸಮಾರಂಭ ನಡೆಯಿತು. ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ವಿವೇಕ ಕೊಠಡಿಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಲಭ್ಯವಿರುವ ಸಂಪನ್ಮೂಲಗಳ ಸದ್ಬಳಕೆಯನ್ನು ಮಾಡುವ ಮೂಲಕ ಉತ್ತಮ ಫಲಿತಾಂಶದೊಂದಿಗೆ ಕಾಲೇಜಿಗೆ ಮತ್ತು ಹೆತ್ತವರಿಗೆ ಕೀರ್ತಿ ತರಬೇಕು ಎಂದರು.

ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮಲತಾ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಗಣೇಶ್ ಆಚಾರ್ಯ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಅಡ್ವೆ, ಪ್ರೀಯಾ, ಸುಜಾತಾ, ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್, ಹಿರಿಯ ಶಿಕ್ಷಕರಾರದ ಮಾಧವ ಸಾಲಿಯಾನ್ ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಮಿಳುನಾಡಿನಲ್ಲಿ ಶೇ. 85; ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ಶೇ. 92 ಮತದಾನ

ನವದೆಹಲಿ, ಏ.24: ತಮಿಳುನಾಡಿನಲ್ಲಿ ಒಂದೇ ಹಂತದ ವಿಧಾನಸಭಾ ಚುನಾವಣೆ ಮತ್ತು ಪಶ್ಚಿಮ...

ನಂದಳಿಕೆ: ಅಬ್ಬನಡ್ಕ ಕ್ರಿಕೆಟ್ ಟ್ರೋಫಿ 2026 ಉದ್ಘಾಟನೆ

ಬೆಳ್ಮಣ್, ಏ.24: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ: ಎಂ ಎ ಗಫೂರ್

ಉಡುಪಿ, ಏ.23: ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು...
error: Content is protected !!