Tuesday, September 8, 2026
Tuesday, September 8, 2026

ಜ್ಞಾನಸುಧಾ: ಮೌಲ್ಯಸುಧಾ-42

ಜ್ಞಾನಸುಧಾ: ಮೌಲ್ಯಸುಧಾ-42

Date:

ಗಣಿತನಗರ, ನ.18: ಇದ್ದ ಬದುಕನ್ನು ಬಿದ್ದು ಹೋಗದಂತೆ, ಸಮಸ್ಯೆಯನ್ನು ಒದ್ದು, ಎಲ್ಲವನ್ನೂ ಗೆದ್ದು ಬರಬೇಕು. ಅದೇ ಜೀವನ, ಅದೇ ಸಂಜೀವನ. ವ್ಯಕ್ತಿ ದೃಷ್ಟಿಕೋನದದಲ್ಲಿ ಬದಲಾವಣೆ ತಂದುಕೊಂಡು ಅವಮಾನವನ್ನು ಸವಾಲಾಗಿ ಸ್ವೀಕರಿಸಿ ಸಕರಾತ್ಮಕ ಯೋಚನೆಯ ಹಠ ನಮ್ಮದಾದಾಗ ಗೆಲುವು ಚಟವಾಗಲು ಸಾಧ್ಯ. ಎಂದು ರಾಜ್ಯ ಶಿಕ್ಷಕ ಪ್ರಶಸ್ತಿ ವಿಜೇತ ಕೋಟ ನರೇಂದ್ರ ಕುಮಾರ್ ರವರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-42ರಲ್ಲಿ ‘ದೀಪ ಹಚ್ಚುವ ಮೊದಲು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ನಾವೆಷ್ಟೂ ಬಾಗುತ್ತೇವೋ ಅಷ್ಟು ಜಾಣರಾಗುತ್ತೇವೆ. ಹಿರಿಯರನ್ನು, ಗುರುಗಳನ್ನು ಗೌರವಿಸುವ ಗುಣ ನಮ್ಮದಾಗಲಿ. ಉತ್ತಮ ಕೇಳುಗರಾದರೆ ಅತ್ಯುತ್ತಮ ಮಾತುಗಾರರಾಗುತ್ತೇವೆ. ನಾವು ಸಂಬಂಧಗಳನ್ನು ಬೆಸೆಯುವ ಸೂಜಿಗಳಾಗಬೇಕು ಎಂದರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರ್, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲರಾದ ಸಾಹಿತ್ಯ ಉಪಸ್ಥಿತರಿದ್ದರು. ಪ್ರಥಮ ಪಿಯುಸಿಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ಯಾ ಜಿ .ಗೌಡ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!