ಉಡುಪಿ, ನ.20: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬೃಹದ್ಯೋಜನೆಯಾದ ಜ್ಞಾನ ಭಾರತಮ್ ಮಿಶನ್ ನವೆಂಬರ್ ತಿಂಗಳ 12 ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಪ್ರಧಾನಮಂತ್ರಿಗಳಿಂದ ಚಾಲನೆಗೊಂಡಿತ್ತು. ದೇಶ ವಿದೇಶಗಳಿಂದ ಸುಮಾರು ಒಂದು ಕೋಟಿ ಹಸ್ತಪ್ರತಿಗಳನ್ನು ಡಿಜಿಟಲ್ ಗೊಳಿಸುವ ಬಹುವೆಚ್ಚದ ಯೋಜನೆಯನ್ನು ಸಂಸ್ಕೃತಿ ಮಂತ್ರಾಲಯದ ಅಧೀನದಲ್ಲಿ ಆಯೋಜಿಸಲಾಗುತ್ತಿದೆ. ದೇಶದ ಎಲ್ಲ ರಾಜ್ಯಗಳಿಗೆ ಮುಖ್ಯ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗುತ್ತಿದೆ. ಈ ಬೃಹತ್ ಯೋಜನೆಗೆ ಕರ್ನಾಟಕ ರಾಜ್ಯ ಮುಖ್ಯ ಸಂಚಾಲಕರಾಗಿ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕರಾದ ಡಾ. ಬಿ ಗೋಪಾಲಾಚಾರ್ಯ ಆಯ್ಕೆಯಾಗಿದ್ದಾರೆ.
ಜ್ಞಾನ ಭಾರತಮ್ ಮಿಶನ್ ಕರ್ನಾಟಕ ರಾಜ್ಯ ಮುಖ್ಯ ಸಂಚಾಲಕರಾಗಿ ಡಾ.ಬಿ.ಗೋಪಾಲಾಚಾರ್ ಆಯ್ಕೆ
ಜ್ಞಾನ ಭಾರತಮ್ ಮಿಶನ್ ಕರ್ನಾಟಕ ರಾಜ್ಯ ಮುಖ್ಯ ಸಂಚಾಲಕರಾಗಿ ಡಾ.ಬಿ.ಗೋಪಾಲಾಚಾರ್ ಆಯ್ಕೆ
Date:




By
ForthFocus™