Monday, February 24, 2025
Monday, February 24, 2025

ಗ್ರಾಹಕ ಸ್ನೇಹಿ ಸೇವೆ ಬ್ಯಾಂಕ್ ಪ್ರಗತಿಗೆ ಪೂರಕ: ಯಶ್ಪಾಲ್ ಸುವರ್ಣ

ಗ್ರಾಹಕ ಸ್ನೇಹಿ ಸೇವೆ ಬ್ಯಾಂಕ್ ಪ್ರಗತಿಗೆ ಪೂರಕ: ಯಶ್ಪಾಲ್ ಸುವರ್ಣ

Date:

ಉಡುಪಿ: ಬ್ಯಾಂಕಿನ ಸಿಬ್ಬಂದಿಗಳ ಕಾರ್ಯಕ್ಷಮತೆಯ ಮೂಲಕ ಗ್ರಾಹಕ ಸ್ನೇಹಿ ಸೇವೆ ಬ್ಯಾಂಕಿನ ಪ್ರಗತಿಗೆ ಪೂರಕವಾಗಿದ್ದು, ಸ್ಪರ್ಧಾತ್ಮಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುನ್ನಡೆಯಲು ಸಿಬ್ಬಂದಿಗಳು ತರಬೇತಿ ಕಾರ್ಯಗಾರದ ಮೂಲಕ ಕಾರ್ಯಕ್ಷಮತೆ ವೃದ್ಧಿಸಲು ಮುಂದಾಗುವಂತೆ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಹೇಳಿದರು. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಇದರ ವತಿಯಿಂದ ಆಯೋಜಿಸಿದ ಸಿಬ್ಬಂದಿ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಬಿ.ಐ ಬ್ಯಾಂಕಿನ ನಿವೃತ್ತ ಡಿಜಿಎಂ ಪ್ರಕಾಶ್ ಆರ್.ಎಸ್, ಮಾರ್ಕೆಟಿಂಗ್ ಇನ್ ಬ್ಯಾಂಕಿಂಗ್, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕಿನ ನಿವೃತ್ತ ಚೀಫ್ ಮ್ಯಾನೇಜರ್ ಶಿವಾನಂದ ಜಿ. ಕುಲಕರ್ಣಿ, ಡಿಜಿಟಲ್ ಬ್ಯಾಂಕಿಂಗ್ ಇನ್ ಇಂಡಿಯಾ ಹಾಗೂ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಮಾನವ ಸಂನ್ಮೂಲ ವಿಷಯದ ಬಗ್ಗೆ ತರಬೇತಿ ನೀಡಿದರು.

ಸಮಾರಂಭದಲ್ಲಿ ಬ್ಯಾಂಕಿನ ವೃತ್ತಿಪರ ನಿರ್ದೇಶಕರಾದ ಮಂಜುನಾಥ ಎಸ್ ಕೆ, ನಿರ್ದೇಶಕರಾದ ಶಿವರಾಮ ಕುಂದರ್, ಬ್ಯಾಂಕಿನ ಎಜಿಎಂ ಶಾರಿಕಾ ಕಿರಣ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!