ಉಡುಪಿ, ನ.25: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣಾ ಯೋಜನೆಯ ಸೌಲಭ್ಯ ಪಡೆಯಲು, ಪ್ರವರ್ಗ-3-ಬಿ ಅಡಿಯಲ್ಲಿ2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರುವ, ನಮೂನೆ-3 ಬಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರುವ, ರಾಜ್ಯದಲ್ಲಿ ಖಾಯಂ ವಿಳಾಸ ಹೊಂದಿರುವ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://kmcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ದೂ.ಸಂಖ್ಯೆ: 0820-2574882 ಅಥವಾ ನಿಗದಮ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080- 29903994 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.




By
ForthFocus™