Monday, September 7, 2026
Monday, September 7, 2026

ಪ್ರಧಾನಿ ಕನಕದಾಸರ ಗುಡಿಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿರುವುದು ಕನಕದಾಸರ ಪವಾಡಕ್ಕೆ ಸ್ಪಷ್ಟ ಸಾಕ್ಷಿ: ಪ್ರಮೋದ್ ಮಧ್ವರಾಜ್

ಪ್ರಧಾನಿ ಕನಕದಾಸರ ಗುಡಿಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿರುವುದು ಕನಕದಾಸರ ಪವಾಡಕ್ಕೆ ಸ್ಪಷ್ಟ ಸಾಕ್ಷಿ: ಪ್ರಮೋದ್ ಮಧ್ವರಾಜ್

Date:

ಉಡುಪಿ, ನ.30: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಡುಪಿ ಶ್ರೀಕೃಷ್ಣಮಠಕ್ಕೆ ಆಗಮಿಸಿದ ಸಂದರ್ಭದಲ್ಲಿ ಪ್ರಪ್ರಥಮವಾಗಿ ಕನಕದಾಸರ ಗುಡಿಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿ, ನಂತರ ಸ್ವರ್ಣಮಯ ಕನಕನ ಕಿಂಡಿಯನ್ನು ಲೋಕಾರ್ಪಣೆಗೈದಿರುವುದು ಕನಕಭಕ್ತರೆಲ್ಲರಿಗೂ ಐತಿಹಾಸಿಕ ಹಾಗೂ ವಿಶೇಷ ದಿನವಾಗಿದೆ.

ಉಡುಪಿಯ ಶ್ರೀಕೃಷ್ಣನನ್ನು ಮಧ್ವಾಚಾರ್ಯರು ಪ್ರತಿಷ್ಠೆ ಮಾಡಿದಂತೆ, ಕನಕದಾಸರನ್ನು ಮಲ್ಪೆ ಮಧ್ವರಾಜರು ಪ್ರತಿಷ್ಠಾಪಿಸಿದರೆಂಬುದು ಇತಿಹಾಸ. 1965ರಲ್ಲಿ ನನ್ನ ತಂದೆಯವರಾದ ಮಲ್ಪೆ ಮಧ್ವರಾಜರು ನಿರ್ಮಿಸಿದ ಕನಕದಾಸರ ಗುಡಿಗೆ, 60 ವರ್ಷಗಳ ಬಳಿಕ ಇಂದು ಪ್ರಧಾನಮಂತ್ರಿಗಳು ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿರುವುದು ಕನಕದಾಸರ ಪವಾಡಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!