Thursday, July 30, 2026
Thursday, July 30, 2026

ಜಯಂಟ್ಸ್ ವೆಲ್ಫೇರ್ ಫೌಂಡೇಶನ್: ಫೆಡರೇಶನ್ ಪ್ರಶಸ್ತಿ ಪ್ರದಾನ ಸಮಾರಂಭ

ಜಯಂಟ್ಸ್ ವೆಲ್ಫೇರ್ ಫೌಂಡೇಶನ್: ಫೆಡರೇಶನ್ ಪ್ರಶಸ್ತಿ ಪ್ರದಾನ ಸಮಾರಂಭ

Date:

ಉಡುಪಿ, ಡಿ.7: ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಫೆಡರೇಶನ್ 6 ಇದರ ವತಿಯಿಂದ ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಇದರ ಅತಿಥ್ಯದಲ್ಲಿ ಜಯಂಟ್ಸ್ ಫೆಡರೇಶನ್ ಪ್ರಶಸ್ತಿ ಪ್ರಧಾನ ಸಮಾರಂಭ ಲಯನ್ಸ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಶಿರ್ವ ಮಹಾಲಸಾ ನಾರಾಯಣಿ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಾತನಾಡಿ, ಜಯಂಟ್ಸ್ ಸಂಸ್ಥೆಯು ಬಹಳ ಪ್ರಭಾವಿಯಾಗಿ ಸಮಾಜದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಅಭಿನಂದನೀಯ ಎಂದರು.
ಜಯಂಟ್ಸ್ ಫೆಡರೇಶನ್ ಸೆಂಟ್ರಲ್ ಕಮಿಟಿ ಮೆಂಬರ್ ದಿನಕರ ಅಮೀನ್ ಮಾತನಾಡಿ, ಜಯಂಟ್ಸ್ ಸಂಸ್ಥೆಯು ಭಾರತೀಯ ಮೂಲದ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು ಕಳೆದ ಐದು ದಶಕಗಳಿಂದ ಮಾನವೀಯ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಅಪೂರ್ವ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡುವ ಕಾರ್ಯ ಎರಡು ದಶಕಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದರು.

ಈ ಸಂದರ್ಭದಲ್ಲಿ ಡಾ ಟಿ ಎಂ ಎ ಪೈ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಶಶಿಕಿರಣ್ ಯು., ಸಮುದಾಯ ವಿಭಾಗದಲ್ಲಿ ಡಾ. ಸಿ ಎಚ್ ವಿ ಎಸ್ ವಿ ಪ್ರಸಾದ್, ಸೇವಾ ವಿಭಾಗದಲ್ಲಿ ಡಾ. ಸ್ಪೂರ್ತಿ ಮಸ್ತಿ ಹೊಳಿ , ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣೇಶ್ ಕಲ್ಯಾಣಪುರ, ಚಲನಚಿತ್ರ ರಂಗದಲ್ಲಿ ರಾಜಿ ಎಂ ರಾವ್, ಶಿಕ್ಷಣ ಕ್ಷೇತ್ರದಲ್ಲಿ ರಾಜೇಂದ್ರ ಭಟ್, ಕೃಷಿ ವಿಭಾಗದಲ್ಲಿ ಮಂಜುನಾಥ ಸಾನು, ಕ್ರೀಡಾ ಕ್ಷೇತ್ರದ ಸಾಧಕ ಅವಿನಾಶ್ ಶೆಟ್ಟಿ, ಸೇವಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಮಲಾಕ್ಷ ಸುವರ್ಣ ಅವರನ್ನು ಜಯಂಟ್ಸ್ ಫೆಡರೇಶನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಫೆಡರೇಶನ್ ಅಧ್ಯಕ್ಷ ತೇಜೇಶ್ವರ್ ರಾವ್ ವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಜಯಂಟ್ಸ್ ಫೆಡರೇಶನ್ ಪದಾಧಿಕಾರಿಗಳಾದ ವೆಂಕಟೇಶ್, ದೀಪಕ್ ಭೋಜ್, ಗಜಾನನ ನೀಲಕರಿ, ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಅಧ್ಯಕ್ಷ ವಿನಯ್ ಕುಮಾರ್ ಪೂಜಾರಿ, ಕಾರ್ಯದರ್ಶಿ ದಿವಾಕರ್ ಪೂಜಾರಿ, ವಾದಿರಾಜ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರ ಮಾಹಿತಿ ಒಳಗೊಂಡ ವಿಶೇಷ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ರೇಖಾ ಪೈ, ಜಗದೀಶ್ ಅಮೀನ್, ರೋಷನ್ ಬಳ್ಳಾಲ್, ಸಮೀತ್ ಶೆಟ್ಟಿ, ಇಕ್ಬಲ್ ಮನ್ನಾ, ನವೀನಚಂದ್ರ ಸನ್ಮಾನಿತರ ಪರಿಚಯ ಮಾಡಿದರು ದಿವಾಕರ್ ಪೂಜಾರಿ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!