ಉಡುಪಿ, ಡಿ.9: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಯುವ ರೈತ ಮತ್ತು ಯುವ ರೈತ ಮಹಿಳೆಯರಿಗೆ ಡಿಸೆಂಬರ್ 15 ರಿಂದ 19 ರ ವರೆಗೆ ಐದು ದಿನಗಳ ಕಾಲ ಅಣಬೆ ಹಾಗೂ ಜೇನು ಕೃಷಿ ಕುರಿತು ತರಬೇತಿ ಕಾರ್ಯಕ್ರಮವನ್ನು ಕುಂದಾಪುರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಡಿ. 12 ರ ಒಳಗಾಗಿ ಮೇಲ್ಕಂಡ ಕಚೇರಿಗೆ ಆಧಾರ್, ಪಹಣೀ ಪತ್ರ, ಬ್ಯಾಂಕ್ ಖಾತೆ ಪ್ರತಿ ಮತ್ತು ಭಾವಚಿತ್ರ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಅಣಬೆ ಮತ್ತು ಜೇನು ಕೃಷಿ ತರಬೇತಿ; ಹೆಸರು ನೋಂದಾಯಿಸಲು ಸೂಚನೆ
ಅಣಬೆ ಮತ್ತು ಜೇನು ಕೃಷಿ ತರಬೇತಿ; ಹೆಸರು ನೋಂದಾಯಿಸಲು ಸೂಚನೆ
Date:




By
ForthFocus™