Saturday, January 17, 2026
Saturday, January 17, 2026

ಪಂಚವರ್ಣ: ಕೋಡಿ ಕನ್ಯಾಣ ಉಂಜಲೋತ್ಸವದ ನಿಮಿತ್ತ 283 ನೇ ಸ್ವಚ್ಛತಾ ಅಭಿಯಾನ

ಪಂಚವರ್ಣ: ಕೋಡಿ ಕನ್ಯಾಣ ಉಂಜಲೋತ್ಸವದ ನಿಮಿತ್ತ 283 ನೇ ಸ್ವಚ್ಛತಾ ಅಭಿಯಾನ

Date:

ಕೋಟ, ಡಿ.15: ಕೋಡಿ ಕನ್ಯಾಣದಲ್ಲಿ ಶನೀಶ್ವರ ದೇಗುಲದ ಬಳಿ ಡಿ.21ರಂದು ನಡೆಯಲಿರುವ ತಿರುಪತಿ ಶ್ರೀ ದೇವರ ಉಂಜಲೋತ್ಸವ ನಡೆಯುವ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ 283ನೇ ಪರಿಸರ ಸ್ನೇಹಿ ಸ್ವಚ್ಛತಾ ಅಭಿಯಾನದ ಮೂಲಕ ಹಮ್ಮಿಕೊಂಡಿತು. ಕೋಡಿ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿ ಪಂಚವರ್ಣದ ಕಾರ್ಯ ಶ್ಲಾಘಿಸಿದರು.

ಕೋಡಿ ಶನೀಶ್ವರ ದೇಗುಲದ ಅಧ್ಯಕ್ಷ ಗೋಪಾಲ ಪೂಜಾರಿ, ಗ್ರಾಮದ ಪ್ರಮುಖರಾದ ರವಿ ಅಮೀನ್, ಉದಯ್ ಕಾಂಚನ್, ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷರಾದ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ, ಕೋಡಿ ಹೊಸಬೇಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ಪ್ರಶಾಂತ್ ಪಡುಕರೆ, ರವೀಂದ್ರ ಕೋಟ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!