Tuesday, September 8, 2026
Tuesday, September 8, 2026

ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಬರಬೇಕು: ಡಾ.ಕೃಷ್ಣ ಕಾಂಚನ್

ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಬರಬೇಕು: ಡಾ.ಕೃಷ್ಣ ಕಾಂಚನ್

Date:

ಕೋಟ, ಡಿ.18: ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಬೇಕು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಹೇಳಿದರು. ಮಂಗಳವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ ೫೦ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆ.ಎಂ.ಎಫ್ ನಿರ್ದೇಶಕ ಶಿವಮೂರ್ತಿ ಕೆ ಮಾತನಾಡಿ, ಜೈ ಜವಾನ್ ಜೈ ಕಿಸಾನ್ ಎಂಬ ಧ್ಯೇಯೋಕ್ತಿ ಬಾಯಲ್ಲಿ ಇದ್ದರೆ ಸಾಲದು. ಅದರ ನೈಜ ಅನುಷ್ಠಾನದ ಬಗ್ಗೆ ಚಿಂತಿಸುವ ಅಗತ್ಯತೆ ಇದೆ ಎಂದರು. ರೈತ ಪುರಸ್ಕಾರವನ್ನು ಕೋಟತಟ್ಟು ಪಡುಕರೆಯ ಕೇರ್ಜುಮನೆ ಚಂದ್ರ ಪೂಜಾರಿ ಇವರಿಗೆ ನೀಡಲಾಯಿತು. ಪ್ರಾರಂಭದಲ್ಲಿ ಗೋ ಪೂಜೆ ನೆರವೇರಿಸಲಾಯಿತು.

ಪ್ಲಾಸ್ಟಿಕ್ ಮುಕ್ತ ಜಾಗೃತಿಯ ಅನುಷ್ಠಾನಕ್ಕಾಗಿ ಬೆಂಗಳೂರಿನ ಕ್ಯಾಪ್ಸ್ ಫೌಂಡೇಶನ್ ಕೊಡ ಮಾಡಿದ ಬಟ್ಟೆ ಚೀಲಗಳನ್ನು ಸಭೆಯಲ್ಲಿ ನೀಡಿ ಜಾಗೃತಿ ಮೂಡಿಸಲಾಯಿತು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಿದ್ಧಿ ಶ್ರೀನಿವಾಸ ಪೂಜಾರಿ, ವಡ್ಡರ್ಸೆ ಗ್ರಾಮ ಪಂಚಾಯತ್ ಸದಸ್ಯ ಕೋಟಿ ಪೂಜಾರಿ, ಶ್ರೀನಿಧಿ ಫ್ರೆಂಡ್ಸ್ ಅಧ್ಯಕ್ಷ ಚಂದ್ರ ಪುತ್ರನ್, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ ಜಯರಾಮ ಶೆಟ್ಟಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಉಪಸ್ಥಿತರಿದ್ದರು. ಪಂಚವರ್ಣ ಯುವಕ ಮಂಡಲದ ಸಲಹಾ ಸಮಿತಿಯ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ಸಂಯೋಜಿಸಿದರು. ಸದಸ್ಯೆ ಗೀತಾ ಶಿವರಾಂ ಸನ್ಮಾನ ಪತ್ರ ವಾಚಿಸಿದರು. ಮಹಿಳಾ ಮಂಡಲದ ಸಂಚಾಕಿ ಸುಜಾತ ಬಾಯರಿ ನಿರೂಪಿಸಿದರು. ಸದಸ್ಯೆ ಶ್ಯಾಮಲ ಸಿ ಪುತ್ರನ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!