Tuesday, September 8, 2026
Tuesday, September 8, 2026

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

Date:

ಉಡುಪಿ, ಡಿ.18: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 2 ದೇವಸ್ಥಾನಗಳಿಗೆ ಮತ್ತು ಈಗಾಗಲೇ ರಚನೆಗೊಂಡಿರುವ 2 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಒಂದು ಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ ಸಿ ದೇವಸ್ಥಾನಗಳ ವಿವರ: ಕುಂದಾಪುರ ತಾಲೂಕು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಉಪ್ಪಿನಕುದ್ರು, ಶ್ರೀ ಶಾಂತೇಶ್ವರ ದೇವಸ್ಥಾನ ಹೊಸಂಗಡಿ.

ಮರುಪ್ರಕಟಣೆ ಹೊರಡಿಸಲಾದ ದೇವಸ್ಥಾನಗಳ ವಿವರ: ಉಡುಪಿ ತಾಲೂಕು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪೆರಂಪಳ್ಳಿ, ಶಿವಳ್ಳಿ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕುಂದಾಪುರ ತಾಲೂಕು ಶ್ರೀ ಬೆಳವಿನಮಕ್ಕಿ ಶ್ರೀ ಮಹಾಗಣಪತಿ ದೇವಸ್ಥಾನ ಸೇನಾಪುರ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕಾಪು ತಾಲೂಕು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಳತ್ತೂರು (ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ). ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 30 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!