Monday, April 20, 2026
Monday, April 20, 2026

ರ‍್ಯಾಂಪ್ ಯೋಜನೆಯಡಿ ಇನ್‌ಕ್ಯೂಬೇಷನ್ ಜಾಗೃತಿ ಕಾರ್ಯಕ್ರಮ

ರ‍್ಯಾಂಪ್ ಯೋಜನೆಯಡಿ ಇನ್‌ಕ್ಯೂಬೇಷನ್ ಜಾಗೃತಿ ಕಾರ್ಯಕ್ರಮ

Date:

ಉಡುಪಿ, ಡಿ.18: ಎಐಸಿ ನಿಟ್ಟೆ ಇನ್‌ಕ್ಯೂಬೇಷನ್ ಸೆಂಟರ್ ನಿಟ್ಟೆ, ಎನ್.ಎಂ.ಎ.ಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ನಿಟ್ಟೆ, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಹಾಗೂ ಕರ್ನಾಟಕ ತಾಂತ್ರಿಕ ಸಲಹಾ ಸೇವೆಗಳ ಸಂಸ್ಥೆ ಸಹಯೋಗದಲ್ಲಿ ಇತ್ತೀಚೆಗೆ ಕಾರ್ಕಳದ ನಿಟ್ಟೆ ಎನ್.ಎಂ.ಎ.ಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಇಲ್ಲಿ ಕೇಂದ್ರ ಸರ್ಕಾರದ ರ‍್ಯಾಂಪ್ ಯೋಜನೆಯಡಿಯಲ್ಲಿ ಏರ್ಪಡಿಸಿದ ಇನ್‌ಕ್ಯೂಬೇಷನ್ ಜಾಗೃತಿ ಕಾರ್ಯಕ್ರಮ ಎಂ.ಎಸ್.ಎಂ.ಇ – ಡಿಎಫ್‌ಒ ಪ್ರಭಾರ ಜಂಟಿ ನಿರ್ದೇಶಕ ಸುಂದರ್ ಶೇರಿಗಾರ್ ಉದ್ಘಾಟಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ ಉದ್ಯಮಶೀಲತೆಯ ಮಹತ್ವವನ್ನು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್ ವಾಣಿಜ್ಯೋದ್ಯಮದ ಪ್ರಾಮುಖ್ಯತೆಯನ್ನು ತಿಳಿಸಿದರು. ಚಾರ್ಟರ್ ಅಕೌಂಟೆಟ್ ಎಸ್.ಎಸ್ ನಾಯಕ್ ಹಾಗೂ ಆರ್.ಕೆ ಬಾಲಚಂದ್ರ ಎಂ.ಎಸ್.ಎಂ.ಇ ಯೋಜನೆಗಳು ಹಾಗೂ ಉದ್ಯಮ ಶೀಲತೆ ಕುರಿತು ಮಾಹಿತಿ ನೀಡಿದರು. ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಸಹಾಯಕ ಸಂಚಾಲಕ ಅರವಿಂದ್ ಬಾಳೇರಿ, ಇನ್‌ಕ್ಯೂಬೇಷನ್ ಮ್ಯಾನೇಜರ್ ಪುನೀತ್ ರೈ, ಪ್ಯಾಬ್ ಲ್ಯಾಬ್ ಕಾರ್ಡಿನೇಟರ್ ಆದರ್ಶ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ. ಎ.ಪಿ. ಆಚಾರ್ ಸ್ವಾಗತಿಸಿ, ದೀಕ್ಷಾ ಶೆಟ್ಟಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ...

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ...

80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಉಡುಪಿ, ಏ.19: ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಬ್ರಹ್ಮಬೈದೇರುಗಳ ಗರೋಡಿ 80 ಬಡಗುಬೆಟ್ಟು ಇಲ್ಲಿಗೆ...
error: Content is protected !!