Saturday, February 28, 2026
Saturday, February 28, 2026

ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ಡಿ.20: ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮುಂಭಾಗದಲ್ಲಿ ಕಳೆದ 6 ದಿನಗಳಿಂದ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿ ಒತ್ತಾಯಿಸಿ ಕೊರಗ ಸಮುದಾಯದ ವತಿಯಿಂದ ನಡೆಯುತ್ತಿರುವ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಭೇಟಿ ನೀಡಿ ಮನವಿ ಸ್ವೀಕರಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಮೂಲ ನಿವಾಸಿಗಳಾಗಿ ಗುರುತಿಸಿ ಕೊಂಡಿರುವ ಕೊರಗ ಸಮುದಾಯ ಅತ್ಯಂತ ಅತೀ ಹಿಂದುಳಿದ ಸಮಾಜವಾಗಿದ್ದು, ಸಮಾಜದ ಮುಖ್ಯವಾಹಿನಿಗೆ ಬರುವ ಉದ್ದೇಶದಿಂದ ಕೊರಗ ಸಮುದಾಯದ ಯುವ ಜನತೆ ಶಿಕ್ಷಣದ ಮೂಲಕ ಉತ್ತಮ ಸಾಧನೆ ಮಾಡಿದ್ದು ಪ್ರತಿಭಾವಂತ ಯುವ ಜನತೆಗೆ ಸರಕಾರಿ ಉದ್ಯೋಗ ನೇರ ನೇಮಕಾತಿ ಮಾಡಲು ರಾಜ್ಯ ಸರಕಾರ ಮುಂದಾಗ ಬೇಕಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಇಲಾಖೆಯ ಸಚಿವರಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಹೇಳಿದರು.

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಅಧ್ಯಕ್ಷರಾದ ಸುಶೀಲ ನಾಡ, ಮುಖಂಡರಾದ ಶೇಖರ ಕೆಂಜೂರು, ಕುಮಾರ ಕೆಂಜೂರು, ಪುತ್ರನ್ ಹೆಬ್ರಿ, ಪುನಿತ್ ಕಾರ್ಕಳ, ರೇಖಾ ಆತ್ರಾಡಿ, ತ್ರಿವೇಣಿ ಕಟಪಾಡಿ, ಪ್ರಜ್ಞಾ ಶಂಕರನಾರಾಯಣ, ಶೀನಾ ಬೆಳ್ಮಣ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!