Saturday, February 7, 2026
Saturday, February 7, 2026

ಚೇತನಾ ಪ್ರೌಢಶಾಲೆ: ಪ್ರತಿಭಾ ಪುರಸ್ಕಾರ

ಚೇತನಾ ಪ್ರೌಢಶಾಲೆ: ಪ್ರತಿಭಾ ಪುರಸ್ಕಾರ

Date:

ಕೋಟ, ಡಿ.21: ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ ಇಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ ಭರತ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ 2026-27 ಜಿಲ್ಲಾ ಗವರ್ನರ್-ಬಿ.ಎಂ.ಭಟ್ ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ಎಸ್ ಎಲ್ ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ, ನಗದು ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಯಿತು.

ಶಾಲೆಗೆ ಪ್ರಥಮ ಸ್ಥಾನ ಬಂದ ವಿದ್ಯಾರ್ಥಿನಿ ವೈಷ್ಣವಿ ಹಾಗೂ ದ್ವಿತೀಯ ಸ್ಥಾನಿ ವಿದ್ಯಾರ್ಥಿನಿ ಪೂರ್ವಿ ಇವರಿಗೆ ಮನಸ್ವಿನಿ ಮಂಗಳೂರು ಇಲ್ಲಿನ ಮನೋರೋಗತಜ್ಞ ಡಾ. ರವೀಶ್ ತುಂಗಾ ಪ್ರತಿ ವರ್ಷವೂ ಕೊಡ ಮಾಡುತ್ತಿರುವ ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕವನ್ನು ನೀಡಿ ಪುರಸ್ಕರಿಸಲಾಯಿತು. ಸಾಧಕ ವಿದ್ಯಾರ್ಥಿನಿಗೆ ಶುಭದ ವೇದವ್ಯಾಸ ಆಚಾರ್ಯ ತಮ್ಮ ಪತಿ ಬಾಳ್ಕುದ್ರು ವೇದವ್ಯಾಸ ಆಚಾರ್ಯರ ಸ್ಮರಣಾರ್ಥ ಹತ್ತು ಸಾವಿರ ರೂಪಾಯಿ ನಗದು ಪುರಸ್ಕಾರ ನೀಡಿ ಗೌರವಿಸಿದರು. ಶಾಲೆಯ ಅಂದಿನ ವಿದ್ಯಾರ್ಥಿನಿ ಸುಮಿತ್ರಾ ಗಾಣಿಗ ಇವರು ತಲಾ ರೂ.5,000/- ಸಹಾಯ ನಿಧಿಯನ್ನು ನೀಡಿದರು.

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕ್ರೀಡಾ ಸಾಧಕರಿಗೆ ಹಾಗೂ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಬಂದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ದತ್ತಿ ನಿಧಿ ವಿತರಣಾ ಕಾರ್ಯಕ್ರಮ ಸೇರಿದಂತೆ ಶಾಲೆಯ ಅಂದಿನ ವಿದ್ಯಾರ್ಥಿಗಳಾದ ವಿಶ್ವನಾಥ ಅಲ್ಸೆ, ಸಿ ಎಚ್ ರೆಹಮಾನ್ ಸಾಹೇಬ್, ಕುಮಾರಿ ಸುಮಿತ್ರ ಗಾಣಿಗ ಇವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಮುಖ್ಯ ಅಭ್ಯಾಗತರಾಗಿ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಎಚ್ ಇಬ್ರಾಹಿಂ ಸಾಹೇಬ್, ರೋಟರಿ ರಾಯಲ್ ಬ್ರಹ್ಮಾವರ ಅಧ್ಯಕ್ಷ ಚಂದ್ರಶೇಖರ ನಾಯರಿ, ಶುಭದ ವೇದವ್ಯಾಸ ಆಚಾರ್ಯ ಬೆಂಗಳೂರು, ಸಿ ಎಚ್. ರೆಹಮನ್ ಸಾಹೇಬ್, ದಿವಾಕರ್ ಶೆಟ್ಟಿ, ಸುಮಿತ್ರ ಗಾಣಿಗ, ವಿಶ್ವನಾಥ ಅಲ್ಸೆ, ಶಾಲಾ ವಿದ್ಯಾರ್ಥಿ ನಾಯಕ ಮನ್ವಿತ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಸ್ವಾಗತಿಸಿ ಶೈಕ್ಷಣಿಕ ಚಟುವಟಿಕೆಗಳ ವರದಿ ವಾಚಿಸಿದರು. ಅಧ್ಯಾಪಕ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಹರ್ಷವರ್ಧನ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!