Thursday, April 23, 2026
Thursday, April 23, 2026

ವಿಜ್ಞಾನ, ಕಲೆ, ಸಾಹಿತ್ಯದ ಸಂಗಮ ಕಾರಂತರು: ಡಾ.ರಾಧಾಕೃಷ್ಣ ಎಸ್ ಐತಾಳ್

ವಿಜ್ಞಾನ, ಕಲೆ, ಸಾಹಿತ್ಯದ ಸಂಗಮ ಕಾರಂತರು: ಡಾ.ರಾಧಾಕೃಷ್ಣ ಎಸ್ ಐತಾಳ್

Date:

ಉಡುಪಿ, ಡಿ.23: ಕಾರಂತರು ಮಕ್ಕಳಿಗಾಗಿ ಮಕ್ಕಳೊಂದಿಗೆ ಬೆರೆತು ಅವರನ್ನು ತಿದ್ದಿ ತಿಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸಿದ ನಿದರ್ಶನವನ್ನು ಕಾಣಬಹುದಾಗಿದೆ. ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕಾರಂತರು ವಿಜ್ಞಾನ ಕಲೆ ಸಾಹಿತ್ಯದ ಸಂಗಮ. ರಂಗವಲ್ಲಿಯ ಮೂಲಕ ಡಾ.ಶಿವರಾಮ ಕಾರಂತರನ್ನು ಮಕ್ಕಳಿಗೆ ಪರಿಚಯಿಸುವುದರ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ಒಂದು ಉತ್ತಮ ಅವಕಾಶವಾಗಿದೆ ಎಂದು ಸೋದೆ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್ ಐತಾಳ್ ಹೇಳಿದರು. ಅವರು ಸೋಮವಾರ ಶಾಲಾ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ವತಿಯಿಂದ ಎಸ್.ವಿ.ಹೆಚ್ ಕನ್ನಡ ಮಾಧ್ಯಮ ಪ್ರೌಢ ಶಾಲೆ ಇನ್ನಂಜೆ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಕಾರಂತರು- ೩ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಡಾ.ಕಾರಂತರ ಪರಿಚಯ ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮದಲ್ಲಿ ಖ್ಯಾತ ರಂಗವಲ್ಲಿ ಕಲಾವಿದೆ ಡಾ.ಭಾರತಿ ಮರವಂತೆ ಅವರಿಂದ ಶಾಲಾ ವಿದ್ಯಾರ್ಥಿಗಳಿಗೆ ಕಾರಂತರ ಬಾಲ ಪ್ರಪಂಚ, ಪ್ರಾಣಿ ಪ್ರಪಂಚ, ಪಕ್ಷಿಗಳ ಅದ್ಭುತ ಲೋಕ ಪುಸ್ತಕದಲ್ಲಿರುವ ಚಿತ್ರಗಳನ್ನು ರಂಗವಲ್ಲಿಯಲ್ಲಿ ಬಿಡಿಸುವ ವಿಶಿಷ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಕ್ಷಗಾನ ಕಲೆಯನ್ನು ಪುನರ್‌ರುಜ್ಜಿವನಗೊಳಿಸಿದ ಕೀರ್ತಿ ಡಾ.ಶಿವರಾಮ ಕಾರಂತರಿಗೆ ಸಲ್ಲುತ್ತದೆ. ಅವರ ಬರಹ-ಬದುಕು ಇಂದಿನ ಯುವ ಪೀಳಿಗೆಗೆ ಮಾದರಿ. ಕಾರಂತರ ಪುಸ್ತಕಗಳ ಓದುವಿಕೆ ಬದುಕಿಗೆ ಸ್ಪೂರ್ತಿಯನ್ನು ನೀಡುತ್ತದೆ ಎಂದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯೆ ಡಾ.ಭಾರತಿಮರಮಂತೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಮಾನಸಿಕ ಆರೋಗ್ಯಕ್ಕೆ ಕಲೆ ಮತ್ತು ಸಾಹಿತ್ಯ ಅದ್ಭುತ ಕೊಡುಗೆಯನ್ನು ನೀಡುತ್ತದೆ. ಓದಿನ ಹವ್ಯಾಸ ವ್ಯಕ್ತಿತ್ವವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ಸಾಹಿತ್ಯ ಹಾಗೂ ಪುಸ್ತಕಗಳ ಓದುವಿಕೆಯ ಕುರಿತು ಆಸಕ್ತಿಯನ್ನು ಹೆಚ್ಚಿಸಿಕೊಂಡು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದರು.

ಇನ್ನಂಜೆ ಎಸ್.ವಿ.ಹೆಚ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು, ನಿವೃತ್ತ ಶಿಕ್ಷಕ ಸತ್ಯ ಸಾಯಿ ಪ್ರಸಾದ್, ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ನಟರಾಜ್ ಉಪಾಧ್ಯಾಯ ಸ್ವಾಗತಿಸಿ, ಅನಿತಾ ವೀರ ಮಥಾಯಸ್ ನಿರೂಪಿಸಿ, ನವೀನ್ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!