Sunday, July 26, 2026
Sunday, July 26, 2026

ಮೊಗವೀರ ಯುವ ಸಂಘಟನೆ ಕೋಟೇಶ್ವರ: ಬೀಚ್ ಸ್ವಚ್ಛತಾ ಅಭಿಯಾನ

ಮೊಗವೀರ ಯುವ ಸಂಘಟನೆ ಕೋಟೇಶ್ವರ: ಬೀಚ್ ಸ್ವಚ್ಛತಾ ಅಭಿಯಾನ

Date:

ಕೋಟ, ಡಿ.28: ಸ್ವಚ್ಛ ಕಡಲತೀರ ನಮ್ಮ ಹೊಣೆ ಎನ್ನುವ ಧ್ಯೇಯೋದ್ದೇಶದೊಂದಿಗೆ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಕೊಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ನೇತೃತ್ವದಲ್ಲಿ ಭಾನುವಾರ ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯಕ್ಕೆ ಘಟಕದ ಅಧ್ಯಕ್ಷ ರಾಘವೇಂದ್ರ ಹರಪ್ಪನಕೆರೆ ಚಾಲನೆ ನೀಡಿದರು.

ಮುಖ್ಯ ಅಭ್ಯಾಗತರಾಗಿ ಬೀಜಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಘಟಕದ ಗೌರವಾಧ್ಯಕ್ಷ ಆನಂದ್ ಕುಂದರ್ ಅಜ್ಜರಬೆಟ್ಟು, ಸ್ಥಾಪಕಾಧ್ಯಕ್ಷ ಸತೀಶ್ ನಾಯ್ಕ್, ನಿಕಟಪೂರ್ವ ಅಧ್ಯಕ್ಷ ನಾಗರಾಜ್ ಬೀಜಾಡಿ, ಜಿಲ್ಲಾ ಉಪಾಧ್ಯಕ್ಷ ರವೀಶ್ ಎಸ್ ಕೊರವಾಡಿ, ಬೀಜಾಡಿ ಪಂಚಾಯತ್ ಸದಸ್ಯ ಅನಿಲ್ ಛತ್ರಬೆಟ್ಟು, ಘಟಕದ ಮಾಜಿ ಗೌರವಾಧ್ಯಕ್ಷ ಸುರೇಶ ಶಾನಾಡಿ, ಮಹಿಳಾ ಅಧ್ಯಕ್ಷೆ ಗಾಯತ್ರಿ ತೆಕ್ಕಟ್ಟೆ, ಜೊತೆ ಕಾರ್ಯದರ್ಶಿ ರಂಜಿತ್ ಚಾತ್ರಬೆಟ್ಟು, ಮಾಜಿ ಅಧ್ಯಕ್ಷರು, ಮಾಜಿ ಮಹಿಳಾ ಅಧ್ಯಕ್ಷರು, ಗುರಿಕಾರರು, ಉಪಾಧ್ಯಕ್ಷರು, ಕೋಶಾಧಿಕಾರಿ, ಕ್ರೀಡಾ ಕಾರ್ಯದರ್ಶಿ, ಸಂಘಟನೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!