Friday, July 24, 2026
Friday, July 24, 2026

ಪುಸ್ತಕಗಳನ್ನು ಓದುವುದರಿಂದ ಕಲ್ಪನಾ ಶಕ್ತಿ ಹೆಚ್ಚಿಸಲು ಸಾಧ್ಯ: ಡುಂಡಿರಾಜ್

ಪುಸ್ತಕಗಳನ್ನು ಓದುವುದರಿಂದ ಕಲ್ಪನಾ ಶಕ್ತಿ ಹೆಚ್ಚಿಸಲು ಸಾಧ್ಯ: ಡುಂಡಿರಾಜ್

Date:

ಉಡುಪಿ, ಡಿ.31: ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ಜನಪ್ರಿಯ ಅಭಿಯಾನದಲ್ಲಿ ಒಂದಾದ ಮನೆಯೇ ಗ್ರಂಥಾಲಯ ಅಭಿಯಾನದ 175 ನೇ ಗ್ರಂಥಾಲಯವನ್ನು ಖ್ಯಾತ ಸಾಹಿತಿ ಹನಿಗವಿ ಹೆಚ್.ಡುಂಡಿರಾಜ್ ರವರು ಸಿದ್ದಬಸಯ್ಯಸ್ವಾಮಿ ಚಿಕ್ಕಮಠ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕಸಾಪ ಉಡುಪಿ ತಾಲೂಕು ಘಟಕದ ವಿನೂತನ ಕಾರ್ಯಕ್ರಮವಾಗಿದೆ. ಪುಸ್ತಕಗಳನ್ನು ಓದುವುದರಿಂದ ನಮ್ಮ ಭಾಷಾಜ್ಞಾನ ಹೆಚ್ಚುವುದು ಮಾತ್ರವಲ್ಲ ಕಲ್ಪನಾ ಶಕ್ತಿ ಇಮ್ಮಡಿಯಾಗುತ್ತದೆ, ಮೆದುಳಿಗೆ ಒಳ್ಳೆ ಕೆಲಸ ಸಿಗುತ್ತದೆ, ಚಿಂತೆಯನ್ನೂ ದೂರ ಮಾಡುತ್ತವೆ. ಈಗಾಗಲೇ ಸುಮಾರು ನಾಲ್ಕು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳನ್ನು ಕಸಾಪ ಉಡುಪಿ ತಾಲೂಕು ಘಟಕ ನೀಡಿರುವುದು ಅಭಿನಂದನಾರ್ಹ ಎಂದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ., ಉಡುಪಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಅಸ್ಟ್ರೋ ಮೋಹನ್, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಪ್ರವೀಣಾ ಮೋಹನ್, ಪ್ರಜ್ಞಾ ಕೊಡವೂರು, ಸಂಹಿತ್, ಆಶ್ಲೇಷ್, ಉಮಾ ಚಿಕ್ಕಮಠ, ಶ್ರೀಗುರು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!