Saturday, February 7, 2026
Saturday, February 7, 2026

ಟಿ. ಎನ್. ಸೀತಾರಾಂ ಅವರಿಗೆ ‘ಪಂಚಮಿ ಪುರಸ್ಕಾರ 2026’

ಟಿ. ಎನ್. ಸೀತಾರಾಂ ಅವರಿಗೆ ‘ಪಂಚಮಿ ಪುರಸ್ಕಾರ 2026’

Date:

ಉಡುಪಿ, ಡಿ.31: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡ ಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ. ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವಧನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಹೆಚ್‌.ಪಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಪ್ರಶಸ್ತಿ ಸಮಿತಿಯ ಸಂಚಾಲಕ ಜನಾರ್ದನ ಕೊಡವೂರು​, ಉಪಾಧ್ಯಕ್ಷ ಮಧುಸೂದನ ಹೇರೂರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!