Home ಸುದ್ಧಿಗಳು ಪ್ರಾದೇಶಿಕ ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, ಪ್ರತಿಭಾನ್ವಿತರಿಗೆ ಅಭಿನಂದನೆ

ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, ಪ್ರತಿಭಾನ್ವಿತರಿಗೆ ಅಭಿನಂದನೆ

325
0

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊರಗ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ “ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ಸಾಧಕರಿಗೆ ಸನ್ಮಾನ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆತ್ಮ ಸಮಾಲೋಚನೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಾಗಾರವು ಇಂದು ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಉಡುಪಿ ನಗರಸಭೆಯ ನಾಮ ನಿರ್ದೇಶಿತ ಸದಸ್ಯೆ ಸುಬೇದಾ, ಎ.ವಿ ಬಾಳಿಗಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸೌಜನ್ಯ ಶೆಟ್ಟಿ, ಐ.ಟಿ.ಡಿ.ಪಿ ಅಧಿಕಾರಿ ದೂದ್ ಪೀರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಚಂದ್ರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಕೊರಗ ಸಮುದಾಯದ ಮುಖಂಡ ಬಾಬು ಪಾಂಗಾಳ ಉಪಸ್ಥಿತರಿದ್ದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ಕೊರಗ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.