ಕೋಟ, ಜ.2: ಪ್ರತಿಯೊಬ್ಬರ ಆರೋಗ್ಯ ಅವರ ಅಂಗೈನಲ್ಲೆ ಇರುತ್ತದೆ ಆದರೆ ಅದರ ಬಗ್ಗೆ ಯಾರೂ ಕೂಡಾ ಯೋಚಿಸಿದಿರುವು ಬೇಸರದ ಸಂಗತಿ ಎಂದು ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೇಖಿ ಚಿಕಿತ್ಸಾ ತಜ್ಞ ಕಾರ್ಕಡ ನಾರಾಯಣ ಆಚಾರ್ ಹೇಳಿದರು. ಮಂಗಳವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇದರ ಮಾರ್ಗದರ್ಶನದಲ್ಲಿ ಕೋಟ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಅರಿವು ನಿಮಗಿರಲಿ ನೆರವು ೧೪ನೇ ಮಾಲಿಕೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.
ಕೋಟ ಗ್ರಾಮ ಪಂಚಾಯತ್ ಪ್ರಥಮ ಪ್ರಜೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಪಂಚವರ್ಣ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮಾ ಶೆಟ್ಟಿ, ಕೋಟ ಪಂಚಾಯತ್ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಾಲತಿ ಶೇಖರ್, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ಸಂಜೀವಿನಿ ಒಕ್ಕೂಟದ ಸಂಪನ್ಮೂಲ ವ್ಯಕ್ತಿ ಸಹನಾ ಹೆಬ್ಬಾರ್ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ವಸಂತಿ ಹಂದಟ್ಟು ಸ್ವಾಗತಿಸಿದರು. ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಸದಸ್ಯೆ ವೀಣಾ ಪ್ರಕಾಶ್ ವಂದಿಸಿದರು. ಕೋಟ ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟ ಸಹಕಾರ ನೀಡಿತು.




By
ForthFocus™