Saturday, January 17, 2026
Saturday, January 17, 2026

ಜ.7: ಕುಂದಾಪುರದಲ್ಲಿ ದೈವಜ್ಞ ದರ್ಶನ ಕಾರ್ಯಕ್ರಮ

ಜ.7: ಕುಂದಾಪುರದಲ್ಲಿ ದೈವಜ್ಞ ದರ್ಶನ ಕಾರ್ಯಕ್ರಮ

Date:

ಕುಂದಾಪುರ, ಜ.4: ಶ್ರೀಮದ್ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪ.ಪೂ.ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಹಾಗೂ ಪ.ಪೂ. ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರ ದೈವಜ್ಞ ದರ್ಶನ ಕಾರ್ಯಕ್ರಮವು ಜ.7 ರಂದು ಬೆಳಿಗ್ಗೆ 10 ಗಂಟೆಗೆ ಕುಂದಾಪುರದ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ನಡೆಯಲಿದೆ. ಅಂದು ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಶಾಸ್ತ್ರಿ ಸರ್ಕಲ್ ನಿಂದ ಪುರಮೆರವಣಿಗೆಯೊಂದಿಗೆ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಬರಮಾಡಿಕೊಳ್ಳಲಾಗುವುದು.

ಸಭಾ ಕಾರ್ಯಕ್ರಮದ ಬಳಿಕ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಶ್ರೀ ಗುರುಗಳ ಪಾದುಕಾ ಪೂಜೆ, ಶ್ರೀ ಗುರುಗಳಿಗೆ ಫಲ-ಪುಷ್ಪ ಸಮರ್ಪಣೆ ನೆರವೇರಲಿದೆ. ನಂತರ ಶ್ರೀ ಸ್ವಾಮೀಜಿಗಳವರಿಂದ ಆಶೀರ್ವಚನ ನುಡಿ, ಫಲ-ಮಂತ್ರಾಕ್ಷತೆ ವಿತರಣೆ ಹಾಗೂ “ಅನ್ನ ಸಂತರ್ಪಣೆ” ಕಾರ್ಯಕ್ರಮ ನಡೆಯಲಿದೆ ಎಂದು ಕುಂದಾಪುರ ದೈವಜ್ಞ ಬ್ರಾಹ್ಮಣ ಸಮಾಜದ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!