ಕಾಪು, ಜ.4: ಜೇಸಿಐ ಶಂಕರಪುರ ಜಾಸ್ಮಿನ್ ಪ್ರಾಂತ್ಯ D ವಲಯ 15 ಜೇಸಿಐ ಭಾರತ ಮತ್ತು ಶ್ರೀ ಮಹಾಲಿಂಗೇಶ್ವರ ಟಿಂಬರ್ಸ್ ಪಡುಬೆಳ್ಳೆ ಆಶ್ರಯದಲ್ಲಿ ಹೊಸ ವರ್ಷದ ಆಚರಣೆ ಪ್ರಯುಕ್ತ ಪಾಂಬೂರು ಕೆಥೋಲಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವಾರ್ಪಣೆ ಸಮಾರಂಭ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.
ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ರಾಜೇಶ್, ಪೂರ್ವ ಅಧ್ಯಕ್ಷರಾದ ನವೀನ್ ಅಮೀನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ, ಪರಶುರಾಮ ಭಟ್, ಪ್ರೇಮ ವೆಂಕಟೇಶ್, ಸಂತೋಷ್ ಕುಲಾಲ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸೋನು ಪಾಂಗಾಳ, ಉಪಾಧ್ಯಕ್ಷರಾದ ರಾಕೇಶ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕರಾದ ಜೆನೆಟೊ ರೇಗೊ ಹಾಗೂ ಜೇಸಿಐ ನ ಸಂತೋಷ್ ಉಪಸ್ಥಿತರಿದ್ದರು.




By
ForthFocus™