Saturday, July 25, 2026
Saturday, July 25, 2026

ಉದ್ಯಾವರ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಉದ್ಯಾವರ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

Date:

ಉದ್ಯಾವರ, ಜ.5: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 60 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿತ್ರೋಡಿ ಪ್ರವೀಣ್ ಮನೆಯಿಂದ ರಮೇಶ್ ಕುಮಾರ್ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ – 10 ಲಕ್ಷ, ಅಂಕುದ್ರು ಮುಖ್ಯ ರಸ್ತೆ ಕಾಂಕ್ರೀಟೀಕರಣ – 10 ಲಕ್ಷ, ಸಂಪಿಗೆನಗರ ಮಹಾಕಾಳಿ 1ನೇ ಅಡ್ಡ ರಸ್ತೆ ಅಭಿವೃದ್ಧಿ – 10 ಲಕ್ಷ, ಕೇದಾರ್ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಳಿ ರಸ್ತೆ ಅಭಿವೃದ್ಧಿಗೆ – 10 ಲಕ್ಷ, ರಾಜಾರಾಮ್ ಭಟ್ ಮನೆ ಬಳಿ ರಸ್ತೆ ಅಭಿವೃದ್ಧಿ – 10 ಲಕ್ಷ, ಪಿತ್ರೋಡಿ ನೀಲಾಧರ್ ಸಾಲಿಯಾನ್ ಮತ್ತು ಸುಗಂಧಿ ಶೆಟ್ಟಿ ಮನೆ ಬಳಿ ರಸ್ತೆ ಕಾಂಕ್ರೀಟೀಕರಣ – 10 ಲಕ್ಷ ಸೇರಿದಂತೆ ಒಟ್ಟು 60 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಸದಸ್ಯರಾದ ರಾಧಾಕೃಷ್ಣ ಶ್ರೀಯಾನ್, ಜಿತೇಂದ್ರ ಶೆಟ್ಟಿ, ಯೋಗೀಶ್ ಕೋಟ್ಯಾನ್, ಸಚಿನ್ ಪಿತ್ರೋಡಿ, ರಮಾನಂದ ಸೆರ್ವೇಗಾರ್, ಮಿಥೇಶ್, ಚೇತನ್, ವೀಣಾ, ಸರಿತಾ, ರೇಖಾ, ಪ್ರಮೀಳಾ ಹಾಗೂ ಸ್ಥಳೀಯ ಪ್ರಮುಖರಾದ ವಿಜಯ್ ಕುಮಾರ್ ಉದ್ಯಾವರ, ಸಂತೋಷ್ ಬೊಳ್ಜೆ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!