Monday, September 7, 2026
Monday, September 7, 2026

ಶೀರೂರು ಪರ್ಯಾಯದ ಆಮಂತ್ರಣ ಪತ್ರಿಕೆ ಬಿಡುಗಡೆ; ಮಾಧ್ಯಮ ಕೇಂದ್ರ ಉದ್ಘಾಟನೆ

ಶೀರೂರು ಪರ್ಯಾಯದ ಆಮಂತ್ರಣ ಪತ್ರಿಕೆ ಬಿಡುಗಡೆ; ಮಾಧ್ಯಮ ಕೇಂದ್ರ ಉದ್ಘಾಟನೆ

Date:

ಉಡುಪಿ, ಜ.7: ಶೀರೂರು ಪರ್ಯಾಯದ ವಿಶೇಷ ಕಾರ್ಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ‌ ನಡೆಯಿತು. ಉಡುಪಿ‌ ಶಾಸಕ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಾಧ್ಯಮ‌ ಕೇಂದ್ರ ಉದ್ಘಾಟಿಸಿದರು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆನೆಗುಡ್ಡೆ ಕ್ಷೇತ್ರದ ಮೊಕ್ತೇಸರ ಶ್ರೀ ರಮಣ ಉಪಾಧ್ಯಾಯ ಮಾತನಾಡಿ, ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹದಿಂದ ಸಾಂಗವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ಬಳಿಕ‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಪುರಪ್ರವೇಶ ಕಾರ್ಯಕ್ರಮದ ವ್ಯವಸ್ಥೆಗಳು ಮತ್ತು ಪರ್ಯಾಯ ಕಾರ್ಯಕ್ರಮದ‌ ಬಗ್ಗೆ ಮಾಹಿತಿ ನೀಡಿದರು
ಪುರಪ್ರವೇಶ ಮೆರವಣಿಗೆಯ ಸಂಚಾಲಕ ಗಣೇಶ್ ರಾವ್ ಮಾತನಾಡಿ, ಪುರಪ್ರವೇಶ ಮೆರವಣಿಗೆ ಕಡಿಯಾಳಿಯಿಂದ ಹೊರಟು ಸಿಟಿಬಸ್ ಸ್ಟಾಂಡ್ ಮೂಲಕ ಕೃಷ್ಣ ಮಠ ತಲುಪಲಿದೆ. ಸುಮಾರು ೧೦೦೦ ಕ್ಕೂ ಅಧಿಕ ಭಜಕರು, ಉಡುಪಿಯ ಸ್ಥಳೀಯ ಜಾನಪದ ತಂಡಗಳು, ಅತಿಥಿ ಅಭ್ಯಾಗತರು ಪುರಪ್ರವೇಶ ಮೆರಣಿಗೆಯಲ್ಲಿ ಭಾಗವಹಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಹೊರೆಕಾಣಿಕೆ ಸಂಚಾಲಕ ಸುಪ್ರಸಾದ್ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯ ಪ್ರತೀ ಮನೆಯಿಂದ ಹೊರೆಕಾಣಿಕೆ ಸಲ್ಲಿಕೆಯಾಗಬೇಕೆಂಬ ಶ್ರೀ ವೇದವರ್ಧನ ತೀರ್ಥರ ಆಶಯದಂತೆ ಎಂಟು ವಲಯಗಳಾಗಿ ವಿಂಗಡಿಸಿ ಒಟ್ಟು 54 ಹೊರೆಕಾಣಿಕೆ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದರು. ಅದೇ ರೀತಿ ಧರ್ಮಸ್ಥಳ‌ ಗ್ರಾಮಾಭಿವೃದ್ಧಿ ಯೋಜನೆ, ಮೀನುಗಾರರ ಸಂಘ, ಸಹಕಾರಿ ಯೂನಿಯನ್, ಬೆಳ್ತಂಗಡಿ ಭಕ್ತರ ತಂಡದಿಂದ ಕನ್ನರ್ಪಾಡಿ ಭಕ್ತಬಳಗ, ಮಟ್ಟು ಗುಳ್ಳ ಸಮರ್ಪಣೆ, ಹಾಗೂ ವಿವಿಧ ತಾಲೂಕು ಕೇಂದ್ರಗಳಿಂದ ಸಂಘ ಸಂಸ್ಥೆಗಳಿಂದ ಹೊರೆಕಾಣಿಕೆ‌ ಸಮರ್ಪಣೆಯಾಗಲಿದೆ ಎಂದರು.

ಬಳಿಕ‌ ಮಾತನಾಡಿದ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಇನ್ನು ಕೇವಲ ಹತ್ತು ದಿನಗಳು ಬಾಕಿ ಉಳಿದಿದ್ದು ಪರ್ಯಾಯದ ಬೇರೆ ಬೇರೆ ಅಗತ್ಯ ಕಾರ್ಯಕ್ರಮಗಳು ನಡೆಯುತ್ತಿದೆ. ನಗರಸಭೆಯ ಮೂಲಕ ನಗರದ ರಸ್ತೆ ಅಭಿವೃದ್ಧಿ, ಹಾಗೂ ಮೂಲಭೂತ ಸೌಕರ್ಯಗಳ ವ್ಯವಸ್ಥೆಗಳ ಕೆಲಸವೂ ನಡೆಯುತ್ತಿದೆ, ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು.

ವೇದಿಕೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ, ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪ್ರಧಾನ‌ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಸಂಚಾಲಕ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಮೋಹನ್ ಭಟ್, ಬಾಲಾಜಿ ಯೋಗೀಶ್ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ಇಂದ್ರಾಳಿ ಜಯಕರ್ ಶೆಟ್ಟಿ, ಸಗ್ರಿ ಗೋಪಾಲಕೃಷ್ಣ ಸಾಮಗ, ಗಣೇಶ್ ರಾವ್, ರಮೇಶ್ ಕಾಂಚನ್, ರಮೇಶ್ ಬಂಗೇರ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ಮಧುಕರ್ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು. ಅಶ್ವಥ್ ಭಾರಧ್ವಜ್ ಕಾರ್ಯಕ್ರಮ‌ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!