Saturday, January 10, 2026
Saturday, January 10, 2026

ಪರಶುರಾಮ ಥೀಮ್ ಪಾರ್ಕ್ ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮ ನಿರ್ವಹಿಸಲು ಸೂಚನೆ

ಪರಶುರಾಮ ಥೀಮ್ ಪಾರ್ಕ್ ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮ ನಿರ್ವಹಿಸಲು ಸೂಚನೆ

Date:

ಉಡುಪಿ, ಜ.9: ಕಾರ್ಕಳ ತಾಲೂಕು ಬೈಲೂರು ಗ್ರಾಮದ ಯರ್ಲಪಾಡಿಯ ಪರಶುರಾಮ ಥೀಮ್ ಪಾರ್ಕ್ನ ಕಾಮಗಾರಿ ಮುಕ್ತಾಯವಾಗುವವರೆಗೂ ಇದರ ನಿರ್ವಹಣೆಯು ಅನುಷ್ಠಾನ ಸಂಸ್ಥೆಯಾದ ಉಡುಪಿ ನಿರ್ಮಿತಿ ಕೇಂದ್ರ ಸಂಸ್ಥೆಯ ಜವಾಬ್ದಾರಿಯಾಗಿದ್ದು, ಕಾಮಗಾರಿಯು ಸಂಪೂರ್ಣ ಹಸ್ತಾಂತರವಾಗುವವರೆಗೆ ಥೀಂ ಪಾರ್ಕ್ನ ಸ್ವಚ್ಛತೆ ಹಾಗೂ ಅಲ್ಲಿರುವ ಬೆಲೆಬಾಳುವ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಸಾಮಾಗ್ರಿಗಳು ಇತ್ಯಾದಿಗಳ ಸುರಕ್ಷತೆ ಸೇರಿದಂತೆ ಪಾರ್ಕ್ನ ನಿರ್ವಹಣೆಯನ್ನು ಸರಿಯಾಗಿ ವಹಿಸಿ, ಯಾವುದೇ ಸಮಸ್ಯೆಗಳಿಗೆ ಆಸ್ಪದ ನೀಡದೇ ನಿರ್ವಹಣೆ ಮಾಡಬೇಕು. ಜೊತೆಗೆ ಈ ಕೆಳಕಂಡ ಅಂಶಗಳನ್ನು ಪಾಲಿಸುವಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿರುತ್ತಾರೆ.

ಪರಶುರಾಮ ಥೀಮ್ ಪಾರ್ಕ್ನ ಆವರಣದಲ್ಲಿ ಸ್ವಚ್ಛತಾ ಕಾರ್ಯ, ಗಿಡಗಂಟಿ ತೆರವು ಹಾಗೂ ಕಸ ವಿಲೇವಾರಿ ಕಾರ್ಯಗಳನ್ನು ಕೂಡಲೇ ಕೈಗೊಳ್ಳಬೇಕು. ಸಿ.ಸಿ. ಕ್ಯಾಮೆರಾ ಅಳವಡಿಕೆ, ಸದ್ರಿ ಸ್ಥಳದಲ್ಲಿ ಭದ್ರತಾ ದೃಷ್ಠಿಯಿಂದ 24*7 ಕಾವಲುಗಾರರನ್ನು ನಿಯೋಜಿಸಲು ಕ್ರಮ ವಹಿಸಬೇಕು. ಅಧಿಕೃತ ವ್ಯಕ್ತಿಗಳನ್ನು ಹೊರತುಪಡಿಸಿ, ಥೀಮ್ ಪಾರ್ಕ್ಗೆ ಸಾರ್ವಜನಿಕರು ಸೇರಿದಂತೆ ಯಾರೊಬ್ಬರೂ ಪ್ರವೇಶಿಸದಂತೆ ಕ್ರಮ ವಹಿಸಬೇಕು. ಥೀಮ್ ಪಾರ್ಕ್ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಥೀಮ್ ಪಾರ್ಕ್ ಪ್ರದೇಶಕ್ಕೆ ಯಾರಾದರೂ ಅತಿಕ್ರಮಣ ಪ್ರವೇಶ ಮಾಡಿದರೆ ಅವರ ವಿರುದ್ಧ ಎಫ್.ಐ.ಆರ್ ಅಥವಾ ಬಿ.ಎನ್.ಎಸ್.ಎಸ್ 2023 ಪ್ರಕಾರ ಮೊಕ್ಕದ್ದಮೆ ದಾಖಲಿಸಬೇಕು ಹಾಗೂ ಥೀಮ್ ಪಾರ್ಕ್ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ವಹಿಸಬೇಕು.

ಥೀಂ ಪಾರ್ಕ್ ಸ್ಥಳದಲ್ಲಿರುವ ಅಮೂಲ್ಯ ವಸ್ತುಗಳು, ನಿರ್ಮಾಣ ಸಾಮಾಗ್ರಿಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಥೀಂ ಪಾರ್ಕ್ ಕಾಮಗಾರಿ ಮುಕ್ತಾಯಗೊಳ್ಳುವವರೆಗೂ ಸದ್ರಿ ಥೀಮ್ ಪಾರ್ಕ್ನ ಸಂಪೂರ್ಣ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಈ ಮೇಲ್ಕಂಡ ವಿಷಯಗಳ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಅನುಪಾಲನ ವರದಿಯನ್ನು ಜನವರಿ 10 ರ ಒಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ನೀಡಬೇಕು ಹಾಗೂ ಪ್ರತಿ ವಾರ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಖುದ್ದಾಗಿ ಸ್ಥಳ ಭೇಟಿ ನೀಡಿ ಸ್ವಚ್ಛತೆಯ ಮೇಲುಸ್ತುವಾರಿ ವಹಿಸಿ ಜಿ.ಪಿ.ಎಸ್ ಫೋಟೋದೊಂದಿಗೆ ವರದಿ ನೀಡುವಂತೆ ಸೂಚಿಸಿ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಲಿಗ್ರಾಮ ಜಾತ್ರೆ: ತಾತ್ಕಾಲಿಕ ವ್ಯಾಪಾರಕ್ಕೆ ಅವಕಾಶ

ಉಡುಪಿ, ಜ.9: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2026 ನೇ ಸಾಲಿನ...

ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜ.9: ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯು...

ಸಾಲಿಗ್ರಾಮ ಪ.ಪಂ: ಪ್ರತೀ ಮಂಗಳವಾರದ ಸಾರ್ವಜನಿಕ ಅಹವಾಲು ಸಭೆ

ಉಡುಪಿ, ಜ.9: ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಪ್ರತೀ ಮಂಗಳವಾರ ದಂದು...

ಸ್ವಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ

ಕೋಟ, ಜ.9: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ನೇತೃತ್ವದಲ್ಲಿ ಕಲ್ಪತರು...
error: Content is protected !!