Thursday, January 15, 2026
Thursday, January 15, 2026

ಅಲೆವೂರಿನಲ್ಲಿ ಶೀರೂರು ಶ್ರೀಗಳಿಗೆ ಹುಟ್ಟೂರ ಸನ್ಮಾನ

ಅಲೆವೂರಿನಲ್ಲಿ ಶೀರೂರು ಶ್ರೀಗಳಿಗೆ ಹುಟ್ಟೂರ ಸನ್ಮಾನ

Date:

ಉಡುಪಿ, ಜ.14: ಅಲೆವೂರು ಗುಡ್ಡೆಅಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಸನ್ಮಾನ ನಡೆಯಿತು. ಅಲೆವೂರಿಗೆ ಆಗಮಿಸಿದ ಶ್ರೀಗಳಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.

ಅಲೆವೂರು ಕಟ್ಟೆ ಗಣಪತಿ‌ ಸನ್ನಿಧಿ ಶೀರೂರು ಮಠಾಧೀಶರಾಗಿದ್ದ ಲಕ್ಷ್ಮೀವರ ತೀರ್ಥರಿಗೆ ಬಹಳ ಪ್ರಿಯವಾದ ತಾಣ. ಬಳಿಕ ಕಟ್ಟೆ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀ ಗಳು ಆರತಿ ಬೆಳಗಿದರು. ಸಮಿತಿಯ ಪರವಾಗಿ ಊರ ನಾಗರಿಕರ ಪರವಾಗಿ ಶ್ರೀಗಳಿಗೆ ಗೌರವದ ಅಭಿನಂದನೆ‌ ಸಲ್ಲಿಸಲಾಯಿತು. ನಂತರ ಸಂಕಲ್ಪ ಸಭಾಂಗಣದಿಂದ ಶ್ರೀಪಾದರಿಗೆ ವಿವಿಧ ಭಜನಾ ತಂಡಗಳು, ಕೊಂಬು, ವಾದ್ಯ, ಚೆಂಡೆ, ಬ್ಯಾಂಡ್ ಹಾಗೂ ಇನ್ನಿತರ ವೇಷಭೂಷಣದೊಂದಿಗೆ ರಜತ ವಾಹನದಲ್ಲಿ ಅಲೆವೂರು ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ನಡೆಯಿತು.

ಮೆರವಣಿಗೆ ಬಳಿಕ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅದ್ಯಕ್ಷ ಸಮರನಾಥ್ ಶೆಟ್ಟಿ , ಊರ ನಾಗರಿಕರು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.15: ಪರ್ಯಾಯ ದೀಪಾಲಂಕಾರ ಉದ್ಘಾಟನೆ; ಜ.16 ಕ್ಕೆ ಪರಶುರಾಮ ಸ್ವಾಗತ ಗೋಪುರಕ್ಕೆ ಶಿಲಾನ್ಯಾಸ

ಉಡುಪಿ, ಜ.14: ಶ್ರೀ ಶೀರೂರು ಮಠ ಪರ್ಯಾಯ ಮಹೋತ್ಸವದ ಪ್ರಯುಕ್ತ ನಗರದಲ್ಲಿ...

ಶೀರೂರು ಶ್ರೀ ಪ್ರಥಮ ಸರ್ವಜ್ಞಪೀಠಾರೋಹಣ ಸಫಲರಾಗಿಸೋಣ: ಶಾಸಕ ಯಶಪಾಲ್ ಸುವರ್ಣ

ಮುಂಬಯಿ, ಜ.13: ಉಡುಪಿ ಪರ್ಯಾಯ ವಿಶ್ವಕ್ಕೆ ಪ್ರಸಿದ್ಧವಾಗಿದೆ. ಈ ಬಾರಿಯ ಈ...

ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ: ಡಾ.ವಿಜಯ ಬಲ್ಲಾಳ್

ಉಡುಪಿ, ಜ.13: ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ....

ಉಡುಪಿ: ಪರ್ಯಾಯ ಮಹೋತ್ಸವ ಅಂಗವಾಗಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಉಡುಪಿ, ಜ.13: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...
error: Content is protected !!