ಉಡುಪಿ, ಜ.18: ಕುಂದಾಪುರ ತಾಲೂಕಿನ ಕುಂಭಾಶಿ, ತೆಕ್ಕಟ್ಟೆ ಹಾಗೂ ಗೋಪಾಡಿ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಚರಂಡಿ ಸಹಿತ ಪಾದಚಾರಿ ಮಾರ್ಗವಿರುವ ಸರ್ವೀಸ್ ರೋಡ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿರುವ ಒಟ್ಟು 673 ಮರಗಳನ್ನು ಕಡಿಯಲು ಉದ್ದೇಶಿಸಿರುವ ಹಿನ್ನೆಲೆ ಜನವರಿ 23 ರಂದು ಬೆಳಗ್ಗೆ 11 ಗಂಟೆಗೆ ಕುಂದಾಪುರ ವಲಯ ಅರಣ್ಯ ಅಧಿಕಾರಿಯವರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ಏರ್ಪಡಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗಾಗಿ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ಮೂಲಕ ಆಕ್ಷೇಪಣೆಯನ್ನು ಸಲ್ಲಿಸಬಹುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
Date:




By
ForthFocus™