Monday, January 19, 2026
Monday, January 19, 2026

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

Date:

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ ವ್ಯಕ್ತಿತ್ವವನ್ನು ಮೌಲ್ಯಯುತವಾಗಿ ರೂಪಿಸಿಕೊಳ್ಳಲು ಸಾಧ್ಯವಿದೆ. ಇಂದಿನ ಯುವ ಜನಾಂಗಕ್ಕೆ ವಿವೇಕಾನಂದರ ತತ್ವಗಳು ಬಹಳ ದೊಡ್ಡ ಪ್ರೇರಣೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಸುಜಾತ ದೇವಾಡಿಗ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್‌.ವಿ ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಆಶಯ ನುಡಿಗಳನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಕರಾವಳಿ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷರಾದ ಯಶವಂತ ಗಂಗೊಳ್ಳಿ ಮಾತನಾಡಿ, ಸದಾ ಕಾಲ ಸದ್ವಿಚಾರಗಳನ್ನು ಧ್ಯಾನಿಸುತ್ತಾ ಉತ್ತಮ ಕೆಲಸಗಳಲ್ಲಿ ನಮ್ಮನ್ನು ತೊಡಗಿಸಿಕೊಂಡಾಗ ಜೀವನ ಸುಂದರವಾಗುತ್ತದೆ ಮತ್ತು ನಿಜವಾದ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಅಭಿಜ್ಞಾ ಖಾರ್ವಿ, ಕೀರ್ತನಾ ಪೂಜಾರಿ ಮತ್ತು ಪ್ರಾರ್ಥನಾ ಪೈ ವಿವೇಕ ವಿಚಾರಗಳನ್ನು ಪ್ರಸ್ತುತಪಡಿಸಿದರು. ಕಾಲೇಜಿನ ಸ್ವಚ್ಛತಾ ಸಿಬ್ಬಂದಿ ಆಶಾ ಖಾರ್ವಿ ಅವರನ್ನು ಗೌರವಿಸಲಾಯಿತು.

ಕನ್ನಡ ಉಪನ್ಯಾಸಕ ಹೆಚ್ ಸುಜಯೀಂದ್ರ ಹಂದೆ ಮತ್ತು ಸ. ವಿ.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು. ಎಸ್ ವಿ ಕಾಮರ್ಸ್ ಕ್ಲಬ್ ಸಂಯೋಜಕರಾದ ನರೇಂದ್ರ ಎಸ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು ಜಯಶ್ರೀ ಸ್ವಾಗತಿಸಿದರು. ಅದಿತಿ ಎಸ್ ಖಾರ್ವಿ ಪ್ರಾರ್ಥಿಸಿ ಶಿವಾನಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...

ಕ್ರೀಡಾ ಶಾಲೆ/ನಿಲಯ ಪ್ರವೇಶಾತಿ: ಕ್ರೀಡಾಪಟುಗಳ ಆಯ್ಕೆ

ಉಡುಪಿ, ಜ.18: 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 7 ನೇ ತರಗತಿಯಲ್ಲಿ...
error: Content is protected !!