ಉಡುಪಿ, ಜ.23: ಉಡುಪಿ ಶ್ರೀಕೃಷ್ಣಮಠಕ್ಕೆ ಬೆಂಗಳೂರಿನ ಪ್ರಸಿದ್ಧ ಚಿನ್ನಾಭರಣ ಸಂಸ್ಥೆಯಾದ ಆಭರಣ ಟೈಮ್ ಲೆಸ್ ಜುವೆಲರಿ ಆಡಳಿತ ನಿರ್ದೇಶಕ ಡಾ. ಪ್ರತಾಪ್ ಮಧುಕರ ಕಾಮತ್ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಶ್ರೀ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪರ್ಯಾಯ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಮೋಹನ್ ಭಟ್, ಮಧುಕರ ಮುದ್ರಾಡಿ, ನಂದನ್ ಜೈನ್ ಉಪಸ್ಥಿತರಿದ್ದರು.




By
ForthFocus™