Monday, February 24, 2025
Monday, February 24, 2025

ಡಾ. ಗಣನಾಥ ಎಕ್ಕಾರರ ವೃತ್ತಿ ಜೀವನ ಯುವ ಜನತೆಗೆ ಮಾದರಿ: ಬನ್ನಂಜೆ ಬಾಬು ಅಮೀನ್

ಡಾ. ಗಣನಾಥ ಎಕ್ಕಾರರ ವೃತ್ತಿ ಜೀವನ ಯುವ ಜನತೆಗೆ ಮಾದರಿ: ಬನ್ನಂಜೆ ಬಾಬು ಅಮೀನ್

Date:

ಉಡುಪಿ: ಬದುಕಿನಲ್ಲಿ ವೃತ್ತಿ ಜೀವನವು ಎರಡನೇ ಘಟ್ಟವಾಗಿದ್ದು, ಅದನ್ನು ಸಾರ್ಥಕಗೊಳಿಸಿದವರು ಎಕ್ಕಾರ್ ಅವರು. ಒಬ್ಬ ಒಳ್ಳೆಯ ಅಧ್ಯಾಪಕ ಮತ್ತು ಅಧಿಕಾರಿ ಹೇಗಿರಬೇಕೆಂಬುದನ್ನು ಅವರು ತೋರಿಸಿದ್ದಾರೆ. ಶ್ರೇಷ್ಠ ಬೋಧಕನಾಗಿ, ಸರಕಾರಿ ಅಧಿಕಾರಿಯಾಗಿ ಅವರು ಯುವ ಜನಾಂಗಕ್ಕೆ ಮಾದರಿಯಾಗಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮೊದಲ ಎನ್.ಎಸ್.ಎಸ್. ಪ್ರಶಸ್ತಿ ಪಡೆಯಲು ಕಾರಣರಾಗಿದ್ದ ಅವರು ಸದಾ ಸ್ಮರಣೀಯರು ಎಂದು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಹೇಳಿದರು. ಅವರು ಹೊಟೇಲ್ ಕಾರ್ತಿಕ್ ಇಂಟರ್‌ನ್ಯಾಷನಲ್‌ನಲ್ಲಿ ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಮತ್ತು ಮಿತ್ರ ಮಂಡಳಿಯ ಆಶ್ರಯದಲ್ಲಿ ನಡೆದ ಡಾ. ಗಣನಾಥ ಎಕ್ಕಾರುರವರ ಸಾರ್ವಜನಿಕ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲ ಡಾ. ಸುರೇಶ್ ರೈ ಮಾತನಾಡಿ, ಎನ್.ಎಸ್.ಎಸ್. ಮೂಲಕ ಕಾಲೇಜಿಗೆ ಮಾತ್ರವಲ್ಲ ರಾಜ್ಯಕ್ಕೆ ಘನತೆಯನ್ನು ತಂದವರು ಡಾ. ಎಕ್ಕಾರ್‌ರವರು. ಅವರು ೩೩ ವರ್ಷಗಳ ವೃತ್ತಿ ಜೀವನ ಸಾರ್ಥಕವಾಗಿದೆ ಎಂದರು.

ತುಳು ಸಿರಿ ಚಾವಡಿಯ ಸಂಚಾಲಕ ಈಶ್ವರ ಶೆಟ್ಟಿ ಚಿಟ್ಪಾಡಿ ಅವರು ಎಕ್ಕಾರರು ತುಳು ಜಾನಪದ ಮತ್ತು ಸಾಹಿತ್ಯಕ್ಕೆ ಸಲ್ಲಿಸಿದ ಸೇವೆಯನ್ನು ನೆನಪಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಹರಿಯಪ್ಪ ಕೋಟ್ಯಾನ್ ಎಕ್ಕಾರರ ಸಮಾಜಮುಖಿ ಕಾರ್ಯಗಳನ್ನು ಪ್ರಶಂಸಿಸಿದರು.

ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಪ್ರಸಾದ್ ರಾವ್, ಶಂಕರನಾರಾಯಣ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಉದಯಕುಮಾರ್ ಶೆಟ್ಟಿ, ಹಳೆಯಂಗಡಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಶ್ರೀಧರ್, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾದ ಕೃಷ್ಣಾನಂದ ಅವರು ಶುಭ ಹಾರೈಸಿದರು.

ಕ್ರೀಡಾ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಘವ ನಾಯ್ಕ ವಂದಿಸಿದರು. ಈ ಸಂದರ್ಭದಲ್ಲಿ ಡಾ. ಗಣನಾಥ ಎಕ್ಕಾರು ಹಾಗೂ ಡಾ. ನಿಕೇತನಾ ಅವರನ್ನು ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!