Wednesday, March 4, 2026
Wednesday, March 4, 2026

ಫೆ.5: ನಿಟ್ಟೆಯಲ್ಲಿ ಸಿಇಟಿಇ 2026 ಸಮ್ಮೇಳನ ಉದ್ಘಾಟನೆ

ಫೆ.5: ನಿಟ್ಟೆಯಲ್ಲಿ ಸಿಇಟಿಇ 2026 ಸಮ್ಮೇಳನ ಉದ್ಘಾಟನೆ

Date:

ಕಾರ್ಕಳ, ಫೆ.1: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್–ಕ್ಯಾಂಪಸ್ ಕೇಂದ್ರದ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ‘ಐಸಿಇಟಿಇ–2026 ಬಹುಸಮ್ಮೇಳನ’ವನ್ನು ಫೆಬ್ರವರಿ 5 ರಿಂದ 7 ರವರೆಗೆ ನಿಟ್ಟೆ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಈ ಬಹುಸಮ್ಮೇಳನದ ಉದ್ಘಾಟಕರಾಗಿ ‘ಸಿಎಸ್ಐಆರ್ – ರಾಷ್ಟ್ರೀಯ ಓಶನೋಗ್ರಾಫಿ ಸಂಸ್ಥೆ’ (ಎನ್‌ಐಒ), ಗೋವಾದ ನಿರ್ದೇಶಕ ಡಾ. ಸುನಿಲ್ ಕುಮಾರ್ ಸಿಂಗ್ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೇರಾಯ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಜಪಾನ್‌ನ ರಿತ್ಸುಮೇಕಾನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಉಪಡೀನ್ ಪ್ರೊ. ಯಸುಹಿರೋ ಶಿಯೋಮಿ, ದಕ್ಷಿಣ ಕೊರಿಯಾದ ಕುನ್ಸಾನ್ ರಾಷ್ಟ್ರೀಯ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಕಂಪ್ಯೂಟರ್ & ಸಾಫ್ಟ್ವೇರ್ ನ ಪ್ರಾಧ್ಯಾಪಕ ಡಾ. ಇನ್ ಹೋ ರಾ, ಈಜಿಪ್ಟ್‌ನ ಅಲ್–ಅಝರ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಹೆಶಂ ನಬೀಲ್, ಮಲೇಷಿಯಾದ ಯುನಿವರ್ಸಿಟಿ ಟೆಕ್ನೋಲೋಜಿ ಮಲೇಷಿಯಾದ ಸಹಪ್ರಾಧ್ಯಾಪಕ ಡಾ. ಮೊಹಮ್ಮದ್ ಇಬ್ರಾಹಿಂ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಐಸಿಇಟಿಇ–2026 ಬಹುಸಮ್ಮೇಳನವು ನಿಟ್ಟೆ–ಬಯೋ 2026, ಸಿಟಿಸಿಎಸ್ 2026, ಎಐಡಿಇ 2026, ಅರೀವ್ 2026, ವಿಸ್ಪೈಸ್ 2026, ಎಸ್‌ಎಂಇ 2026 ಮತ್ತು ಎಂಎಸ್‌ಎಂಎಟಿ 2026 ಎಂಬ ಏಳು ಅಂತಾರಾಷ್ಟ್ರೀಯ ಸಮ್ಮೇಳನಗಳನ್ನು ಒಳಗೊಂಡಿದೆ. ಈ ಸಮ್ಮೇಳನದಲ್ಲಿ ಭಾರತ ಹಾಗೂ ವಿದೇಶಗಳಾದ ಜಪಾನ್, ದಕ್ಷಿಣ ಕೊರಿಯಾ, ಈಜಿಪ್ಟ್, ಮಲೇಷಿಯಾ ಮೊದಲಾದ ದೇಶಗಳಿಂದ ಗಣ್ಯ ವಿದ್ವಾಂಸರು ಮತ್ತು ಸಂಶೋಧಕರು ತಮ್ಮ ಪರಿಣಿತ ಕ್ಷೇತ್ರಗಳಲ್ಲಿ ಉಪನ್ಯಾಸ ನೀಡಲಿದ್ದಾರೆ. ‘ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಲಿದ್ದಾರೆ. ಕೃತಕ ಬುದ್ಧಿಮತ್ತೆ, ಎಂಜಿನಿಯರಿಂಗ್, ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಇತ್ತೀಚಿನ ಸಂಶೋಧನಾ ಟ್ರೆಂಡ್ ಗಳ ಕುರಿತು ಆಳವಾದ ಚರ್ಚೆ ನಡೆಯಲಿದೆ’ ಎಂದು ಸಂಸ್ಥೆಯ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಧಾನಗಳ ಅರಿವು ಕಾರ್ಯಕ್ರಮ

ತೆಂಕನಿಡಿಯೂರು, ಮಾ.4: ಯಶಸ್ವಿ ಪ್ರಾಜೆಕ್ಟ್ಗಾಗಿ ಸ್ಪಷ್ಟ ಸಂಶೋಧನಾ ಸಮಸ್ಯೆ, ನಿರ್ದಿಷ್ಟ ಉದ್ದೇಶಗಳು,...

ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಮಾ.4: ಕರ್ನಾಟಕ ಕುರಿ ಮತ್ತು ಎಣ್ಣೆ ಅಭಿವೃದ್ಧಿ ನಿಗಮ ನಿಯಮಿತ,...

ಮಹನೀಯರುಗಳ ತತ್ವಾದರ್ಶ ಪಾಲನೆಯಿಂದ ಮೌಲ್ಯಯುತ ಸಮಾಜ ನಿರ್ಮಾಣ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಮಾ.4: ಶ್ರೀ ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಹಲವಾರು...

ಮಂಗಳೂರು ವಿವಿ ಪದವಿ ಪರೀಕ್ಷೆ: ರಥಬೀದಿ ಪದವಿ ಕಾಲೇಜಿಗೆ ಎರಡು ರ‍್ಯಾಂಕ್

ಮಂಗಳೂರು, ಮಾ.4: 2024-25 ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ...
error: Content is protected !!