Monday, July 27, 2026
Monday, July 27, 2026

ಯುವ ಭಾರತ ನಿರ್ಮಾಣಕ್ಕೆ ಮುನ್ನಡಿ ಬರೆದ ಬಜೆಟ್: ಯಶ್ಪಾಲ್ ಸುವರ್ಣ

ಯುವ ಭಾರತ ನಿರ್ಮಾಣಕ್ಕೆ ಮುನ್ನಡಿ ಬರೆದ ಬಜೆಟ್: ಯಶ್ಪಾಲ್ ಸುವರ್ಣ

Date:

ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ತಮ್ಮ 9 ನೇ ಬಜೆಟ್ ಮಂಡಿಸಿದ್ದು, ದೇಶದ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮೂಲಕ ವಿಕಸಿತ ಭಾರತಕ್ಕೆ ಪೂರಕವಾಗಿ ಯುವ ಭಾರತ ನಿರ್ಮಾಣಕ್ಕೆ ಈ ಬಜೆಟ್ ಮುನ್ನುಡಿ ಬರೆಯಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ. ದೇಶಾದ್ಯಂತ ಏಳು ಹೈಸ್ಪೀಡ್ ರೈಲು ಕಾರಿಡಾರ್ ಗಳ ಅಭಿವೃದ್ಧಿ, ರಕ್ಷಣಾ ವಲಯಕ್ಕೆ ವಿಶೇಷ ಆದ್ಯತೆ, ಯುವ ಜನತೆಗೆ ಉದ್ಯೋಗ ಸೃಷ್ಟಿಗಾಗಿ ಐಟಿ ಸಂಸ್ಥೆಗಳಿಗೆ ಪ್ರೋತ್ಸಾಹ, 16ನೇ ಹಣಕಾಸು ಆಯೋಗದ ಮೂಲಕ ರಾಜ್ಯಗಳಿಗೆ ಗರಿಷ್ಠ ಅನುದಾನ, ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ “ಶಿ ಮಾರ್ಟ್” ಯೋಜನೆ, ಎಲ್ಲಾ ರಾಜ್ಯಗಳಿಗೆ ಯೂನಿವರ್ಸಿಟಿ ಟೌನ್ ಶಿಪ್ ಜೊತೆಗೆ ವಿದ್ಯಾರ್ಥಿನಿಲಯಗಳ ನಿರ್ಮಾಣಕ್ಕೆ ಆದ್ಯತೆ, ಕೃಷಿ, ಮೀನುಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡುವ ಕಾರ್ಯಕ್ರಮಗಳನ್ನು ಬಜೆಟ್ ಒಳಗೊಂಡಿರುವುದು ದೇಶದ ಜನತೆಯಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ವಿಶ್ವದ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತವನ್ನು ತೃತೀಯ ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ ಪ್ರಮುಖ ಪಾತ್ರ ವಹಿಸಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!