Monday, July 27, 2026
Monday, July 27, 2026

ಕಸಾಪ ಉಡುಪಿ ತಾಲೂಕು ಘಟಕದ ಸಮಾಲೋಚನಾ ಸಭೆ

ಕಸಾಪ ಉಡುಪಿ ತಾಲೂಕು ಘಟಕದ ಸಮಾಲೋಚನಾ ಸಭೆ

Date:

ಉಡುಪಿ, ಫೆ.2: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏಪ್ರಿಲ್ ತಿಂಗಳಿನಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು. ಈ ಸಂಬಂಧ ಉಡುಪಿ ಮಥುರಾ ಕಂಫರ್ಟ್ ನಲ್ಲಿ ಉಡುಪಿ ತಾಲೂಕು ಘಟಕಾಧ್ಯಕ್ಷ ರವಿರಾಜ್ ಹೆಚ್ ಪಿ. ಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಸಮ್ಮೇಳನದ ಅಧ್ಯಕ್ಷತೆಗೆ ಸುಮಾರು 8 ಹೆಸರುಗಳು ಸಭೆಯಲ್ಲಿ ಬಂದಿದ್ದು ಮುಂದಿನ ವಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಲಾಯಿತು. ಉಡುಪಿ ತಾಲೂಕು ಈಗಿನ ಸಮಿತಿಯ ಅಧಿಕಾರದವಧಿಯಲ್ಲಿ ಇದು 4ನೇ ಸಮ್ಮೇಳನವಾಗಿದ್ದು, ಉಡುಪಿ ತಾಲೂಕಿನ 16ನೇ ಸಮ್ಮೇಳನ ಜರಗಲಿದೆ.

ಬಹಳ ಅದ್ದೂರಿಯಿಂದ ಸಮ್ಮೇಳನ ನಡೆಯಲಿದ್ದು ವಿವಿಧ ವಿಚಾರ ಗೋಷ್ಠಿಗಳು, ಪುಸ್ತಕಗಳ ಲೋಕಾರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಮುಂತಾದ ಹತ್ತು ಹಲವು ಕಾರ್ಯಕ್ರಮಗಳು ನಡೆಸಲು ನಿರ್ಣಯಿಸಲಾಯಿತು.

ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಆಸ್ಟ್ರೋ ಮೋಹನ್, ರಾಘವೇಂದ್ರ ಪ್ರಭು ಕರ್ವಾಲ್, ರಮಾನಂದ, ವಿದ್ಯಾ ಸರಸ್ವತಿ, ದೀಪಾ ಕರ್ಕಿ, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಸುಭೋದ್, ಉಮೇಶ್ ಆಚಾರ್ಯ ಉಪಸ್ಥಿತರಿದ್ದರು.

ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್ ಪಿ ಪ್ರಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ರಂಜನಿ ವಸಂತ್ ನಿರೂಪಿಸಿದರು. ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!