Wednesday, February 4, 2026
Wednesday, February 4, 2026

ಕಲ್ಸಂಕ ಸೇತುವೆ ಅಗಲೀಕರಣ (ಫ್ರೀ ಲೆಫ್ಟ್) ಕಾಮಗಾರಿಗೆ ಚಾಲನೆ

ಕಲ್ಸಂಕ ಸೇತುವೆ ಅಗಲೀಕರಣ (ಫ್ರೀ ಲೆಫ್ಟ್) ಕಾಮಗಾರಿಗೆ ಚಾಲನೆ

Date:

ಉಡುಪಿ, ಫೆ.3: ಉಡುಪಿ ನಗರಸಭೆಯ ಮೂಲಕ ರೂ. 49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಉಡುಪಿ ನಗರದ ವಾಹನ ದಟ್ಟಣೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಫ್ರೀ ಲೆಫ್ಟ್ ಕಾಮಗಾರಿಗೆ ನಗರಸಭೆಯ ಮೂಲಕ 49 ಲಕ್ಷ ವೆಚ್ಚದಲ್ಲಿ ಅನುದಾನ ಒದಗಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡ ಬಳಿಕ ಕಲ್ಸಂಕ ಜಂಕ್ಷನ್ ನಿಂದ ಅಂಬಾಗಿಲು ಕಡೆಗೆ ಸಾಗುವ ವಾಹನಗಳಿಗೆ ಸುಗಮ ಸಂಚಾರ ಸಾಧ್ಯವಾಗಲಿದ್ದು ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದರು.

ಉಡುಪಿ ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಟಿ. ಜಿ. ಹೆಗ್ಡೆ, ಗಿರೀಶ್ ಅಂಚನ್, ಸುಂದರ ಕಲ್ಮಾಡಿ, ಜಯಂತಿ ಪೂಜಾರಿ, ಅಶೋಕ್ ನಾಯ್ಕ್, ಗಿರಿಧರ ಆಚಾರ್ಯ, ಲಕ್ಷ್ಮೀ ಮಂಜುನಾಥ, ಸವಿತಾ ಹರೀಶ್ ರಾಮ್, ಭಾರತಿ ಪ್ರಶಾಂತ್, ಮಾನಸ ಸಿ. ಪೈ, ಅನಿಟ ಡಿಸೋಜ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷರಾದ ಶ್ರೀವತ್ಸ, ಪ್ರಮುಖರಾದ ಕಿಶೋರ್ ಕರಂಬಳ್ಳಿ, ದಯಾಶಿನಿ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ. ಮಣಿಪಾಲ: ಟೈಪ್ 1 ಮಧುಮೇಹ ಹೊಂದಿರುವ ಮಕ್ಕಳಿಗಾಗಿ ಕುಟುಂಬ ಸಂವಾದ ಕಾರ್ಯಕ್ರಮ

ಮಣಿಪಾಲ, ಫೆ.3: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪೀಡಿಯಾಟ್ರಿಕ್...

ಪ್ರಧಾನಿ ಮೋದಿಗೆ ಭಯ; ನಾಲ್ಕು ತಿಂಗಳ ಹಿಂದೆ ವ್ಯಾಪಾರ ಒಪ್ಪಂದ: ರಾಹುಲ್ ಗಾಂಧಿ

ನವದೆಹಲಿ, ಫೆ.3: ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್...

ಘೋಷಣೆ ಕೂಗಿದ್ದಕ್ಕಾಗಿ ಎಂಟು ಕಾಂಗ್ರೆಸ್ ಲೋಕಸಭಾ ಸಂಸದರು ಅಮಾನತು

ನವದೆಹಲಿ, ಫೆ.3: ಸಭಾಪತಿ ದಿಲೀಪ್ ಸೈಕಿಯಾ ಅವರು ಕಾಂಗ್ರೆಸ್ ಸಂಸದರಾದ ಅಮರಿಂದರ್...

ಕಸಾಪ ಉಡುಪಿ ತಾಲೂಕು ಘಟಕದ ಸಮಾಲೋಚನಾ ಸಭೆ

ಉಡುಪಿ, ಫೆ.2: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 16ನೇ...
error: Content is protected !!