Tuesday, April 14, 2026
Tuesday, April 14, 2026

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

Date:

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ ಶುಕ್ರವಾರ ಜರಗಿತು. ಶ್ರೀ ದೇಗುಲದ ನಾಗದೇವರಿಗೆ ಹಾಗೂ ಅಮೃತೇಶ್ವರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಾಗಮಂಡಲ ನಡೆಯಲಿರುವ ಕೋಟ ಗಾಂಧಿ ಮೈದಾನದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವನ್ನು ವೇ.ಮೂ ಮಧುಸೂದನ್ ಬಾಯರಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಚಪ್ಪರ ಕಾರ್ಯಕ್ಕೆ ಚಾಲನೆ ನೀಡಿದರು. ಶ್ಯಾಮಿಯಾನ ಮಾಲಿಕರಾದ ದೇವದಾಸ್ ಕಾಂಚನ್ ಹಾಗೂ ಮಂಡಲದ ಚಪ್ಪರ ನೇತೃತ್ವ ಪಡೆದ ಭರತ್ ಗಾಣಿಗ, ಅಶೋಕ್ ಪೂಜಾರಿ ಅರ್ಚಕರಲ್ಲಿ ಪ್ರಸಾದ ಸ್ವೀಕರಿಸಿ ಪಾಲ್ಗೊಂಡರು.

ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಸುಧಾ ಎ ಪೂಜಾರಿ, ಶಿವ ಪೂಜಾರಿ, ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ ಕಾಂಚನ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ಸುಶೀಲ ಸೋಮಶೇಖರ್, ಹೊನ್ನಾರಿ ಬೊಬ್ಬರ್ಯ ದೇಗುಲದ ಧರ್ಮದರ್ಶಿ ಮಹಾಬಲ ಹೇರ್ಳೆ, ಮಲ್ಯಾಡಿ ಶಿವರಾಮ ಶೆಟ್ಟಿ,ಗಣೇಶ್ ಆಚಾರ್, ದೇಗುಲದ ಅರ್ಚಕ ಅಶ್ವತ್ ಜೋಗಿ, ದೇವೇಂದ್ರ ಗಾಣಿಗ, ರಾಘವೇಂದ್ರ ಪೂಜಾರಿ, ಗಣೇಶ್ ಪೂಜಾರಿ, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ರವೀಂದ್ರ ಐತಾಳ್ ಪಾರಂಪಳ್ಳಿ, ಪ್ರತಾಪ್ ಶೆಟ್ಟಿ ಸಾಸ್ತಾನ, ನಾಗರಾಜ್ ಗಾಣಿಗ ಸಾಲಿಗ್ರಾಮ, ಶೇವಧಿ ನಾಗರಾಜ್ ಗಾಣಿಗ, ವೇಣುಗೋಪಾಲ ಶೆಟ್ಟಿ, ಮಹಾಬಲ ಆಚಾರ್, ಭುಜಂಗ ಗುರಿಕಾರ, ಕೃಷ್ಣ ಜೋಗಿ, ಗಣೇಶ್ ಭಂಡಾರಿ, ತಿಮ್ಮ ಕಾಂಚನ್, ಒಳಮಾಡು ಸೋಮ ಮರಕಾಲ, ಸುಧಾಕರ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: MSW ಗ್ರಾಮೀಣ ಶಿಬಿರ ಉದ್ಘಾಟನೆ

ಬ್ರಹ್ಮಾವರ, ಏ.13: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ಜುಲೈ 3 ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15 ರಿಂದ ನೋಂದಣಿ

ಶ್ರೀನಗರ, ಏ.13: ಈ ವರ್ಷ ಜುಲೈ 3 ರಂದು ವಾರ್ಷಿಕ ಅಮರನಾಥ...

ದೇಶೀಯ ಎಲ್‌ಪಿಜಿ ಸಿಲಿಂಡರ್ ವಿತರಣೆ ಸಾಮಾನ್ಯ; ಭಾನುವಾರ 52 ಲಕ್ಷಕ್ಕೂ ಹೆಚ್ಚು ದೇಶೀಯ ಸಿಲಿಂಡರ್‌ಗಳನ್ನು ವಿತರಣೆ: ಸರ್ಕಾರ

ನವದೆಹಲಿ, ಏ.13: ದೇಶೀಯ ಎಲ್‌ಪಿಜಿ ಸಿಲಿಂಡರ್ ವಿತರಣೆಗಳು ಸಾಮಾನ್ಯವಾಗಿವೆ ಎಂದು ಸರ್ಕಾರ...

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ

ಮುಂಬಯಿ, ಏ.13: ಸೋಮವಾರ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ...
error: Content is protected !!