Wednesday, April 15, 2026
Wednesday, April 15, 2026

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

Date:

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ತೆಂಕನಿಡಿಯೂರು ಗ್ರಾಮದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಬೈಲಕರೆ ನಾಗಬನ ಬಳಿ ರಸ್ತೆ ಅಭಿವೃದ್ಧಿಗೆ 20 ಲಕ್ಷ, ಕೆಳಾರ್ಕಳಬೆಟ್ಟು ಭೋಜರಾಜ ಕಾಂಪೌಂಡ್ ಕೊಜಕುಳಿ ಒಳರಸ್ತೆ ಅಭಿವೃದ್ಧಿ ಕಾಮಗಾರಿಗೆ 15 ಲಕ್ಷ, ಅಂಬಿಕಾ ವೈಟ್ ರಸ್ತೆ ಹಾಗೂ ಲಕ್ಷ್ಮೀ ನಗರ 9ನೇ ಕ್ರಾಸ್ ರಸ್ತೆ ಅಭಿವೃದ್ಧಿಗೆ 15 ಲಕ್ಷ ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಪ್ರಗತಿ ಲೇಔಟ್ ನಲ್ಲಿ 8.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿಯೂ ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.

ಸ್ಥಳೀಯ ಮುಖಂಡರಾದ ಶರತ್ ಬೈಲಕೆರೆ, ವಿಜಯ ಪ್ರಕಾಶ್, ವಿನೋದ್ ಸುವರ್ಣ, ಚರಣ್ ರಾಜ್, ಅರುಣ್ ಜತ್ತನ್, ಸತೀಶ್ ಬೈಲಕೆರೆ, ಕೃಷ್ಣ ಶೆಟ್ಟಿ, ಗಾಯತ್ರಿ, ಮಾಲಿನಿ ಜತ್ತನ್, ಶಾಲಿನಿ, ಪುಷ್ಪ, ಪ್ರಶಾಂತ್ ಹೆಬ್ಬಾರ್, ರೇಖಾ, ಗೀತಾ ಶೆಟ್ಟಿ, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ

ರಾಯ್ಪುರ, ಏ.15: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಲಿಮಿಟೆಡ್ ಉಷ್ಣ ವಿದ್ಯುತ್...

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್...

ದಮನಿತರ ಪಾಲಿನ ಬಿಡುಗಡೆಯ ಬೆಳಕು ಅಂಬೇಡ್ಕರ್‌

ಹಿರಿಯಡಕ, ಏ.15: ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ...
error: Content is protected !!