ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 3 ರಂದು ಉಡುಪಿಯ ಯಕ್ಷಗಾನ ಕಲಾರಂಗದ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದ್ದು, ನಾಟಕಕಾರ, ಯಕ್ಷಗಾನ ಕಲಾವಿದ, ವೈದ್ಯ, ಸಂಘಟಕ, ಸಾಹಿತಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆಯಾಗಿರುತ್ತಾರೆ.
ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್ .ಪಿ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು ಎಂದು ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




By
ForthFocus™