Friday, September 4, 2026
Friday, September 4, 2026

ಸರಸ್ವತಿ ವಿದ್ಯಾಲಯ: ‘ಪಯಣ’

ಸರಸ್ವತಿ ವಿದ್ಯಾಲಯ: ‘ಪಯಣ’

Date:

ಗಂಗೊಳ್ಳಿ, ಫೆ.8: ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗೆಗೆ ಹೆಚ್ಚಿನ ಗಮನವನ್ನು ನೀಡಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯವು ಓದಿನಲ್ಲಿ ಹೆಚ್ಚಿನ ಏಕಾಗ್ರತೆಯನ್ನು ಸಾಧಿಸಲು ನೆರವಾಗುತ್ತದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಯುವಕ ಮಂಡಲದ ಅಧ್ಯಕ್ಷ ಭಾಸ್ಕರ್ ಹೆಚ್‌.ಜಿ ಅವರು ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಇಲ್ಲಿನ ಎಸ್‌.ವಿ ಕಾಮರ್ಸ್ ಕ್ಲಬ್ ಮತ್ತು ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಆಶ್ರಯದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿನ ವಿಶೇಷ ಪರೀಕ್ಷಾ ಮಾರ್ಗದರ್ಶನ ಶಿಬಿರದ ಕಾರ್ಯಕ್ರಮ ‘ಪಯಣ’ವನ್ನು ಉದ್ಘಾಟಿಸಿ ಮಾತನಾಡಿದರು.

ಮಾರ್ಗದರ್ಶನವನ್ನು ನೀಡಿದ ನರೇಂದ್ರ ಎಸ್ ಗಂಗೊಳ್ಳಿ ಮಾತನಾಡಿ ಪರೀಕ್ಷೆ ಎಂದರೆ ಭಯಪಡುವುದಾಗಲಿ ಅಥವಾ ಸಂಭ್ರಮ ಪಡುವುದಾಗಲಿ ಸಲ್ಲದು. ಇದೊಂದು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಜೀವನದ ಒಂದು ಭಾಗ. ನಮ್ಮ ಸ್ಪರ್ಧೆ ಎನ್ನುವುದು ಅಂಕಗಳೊಂದಿಗೆ ಇರಲಿ. ಎಂದು ಹೇಳಿದರು. ಉಪಸ್ಥಿತರಿದ್ದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಚೇರಿ ಸಹಾಯಕಿ ಯಮುನಾ ಮತ್ತು ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಸಿಂಧು ಖಾರ್ವಿ ಅತಿಥಿಗಳನ್ನು ಸ್ವಾಗತಿಸಿದರು. ಧನ್ಯ ಯು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!