Monday, February 24, 2025
Monday, February 24, 2025

ನೌಕರರ ರಾಜ್ಯಮಟ್ಟದ ಕ್ರೀಡಾಕೂಟ- ಸಮಗ್ರ ದ್ವಿತೀಯ ಸ್ಥಾನ ಪಡೆದ ಉಡುಪಿ ಜಿಲ್ಲಾ ತಂಡ

ನೌಕರರ ರಾಜ್ಯಮಟ್ಟದ ಕ್ರೀಡಾಕೂಟ- ಸಮಗ್ರ ದ್ವಿತೀಯ ಸ್ಥಾನ ಪಡೆದ ಉಡುಪಿ ಜಿಲ್ಲಾ ತಂಡ

Date:

ಉಡುಪಿ: ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮೇ 30 ರಿಂದ ಜೂನ್ 1 ರ ವರೆಗೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಜಿಲ್ಲೆಯಿಂದ ಒಟ್ಟು 76 ನೌಕರರು ಭಾಗವಹಿಸಿ, 14 ಚಿನ್ನ, 8 ಬೆಳ್ಳಿ ಹಾಗೂ 8 ಕಂಚಿನೊಂದಿಗೆ ಸಮಗ್ರ ತಂಡ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ವಿಜೇತ ಕ್ರೀಡಾಪಟುಗಳ ವಿವರ: ನ್ಯಾಯಾಂಗ ಇಲಾಖೆಯ ವಾಣಿ-ಈಜು ಸ್ಪರ್ಧೆಯಲ್ಲಿ 3 ಚಿನ್ನ, ಮಂಜುಳಾ-2 ಕಂಚು, ಲಿನಿ ಅವರಿಗೆ ಉದ್ದ ಜಿಗಿತದಲ್ಲಿ 1 ಕಂಚು. ವಾಣಿಜ್ಯ ತೆರಿಗೆ ಇಲಾಖೆಯ ಸಾರಿಕಾ- ಈಜು ಸ್ಪರ್ಧೆಯಲ್ಲಿ 3 ಚಿನ್ನ, ಶ್ರೀಕಾಂತ್-ಭಾರ ಎತ್ತುವ ಸ್ಪರ್ದೆಯಲ್ಲಿ 1 ಬೆಳ್ಳಿ.

ಶಿಕ್ಷಣ ಇಲಾಖೆಯ ವಿಜಯ ಲಕ್ಷ್ಮೀ ಕಾರ್ಕಳ- ಈಜು ಸ್ಪರ್ದೆಯಲ್ಲಿ 1 ಚಿನ್ನ, 2 ಬೆಳ್ಳಿ, ಮಂಜುನಾಥ್ ಐತಾಳ್-ಈಜು ಸ್ಪರ್ಧೆಯಲ್ಲಿ 2 ಕಂಚು, ಗಣೇಶ್ ಶೆಟ್ಟಿ- ಉದ್ದ ಜಿಗಿತದಲ್ಲಿ 1 ಕಂಚು, ಗೀತಾ- 100 ಮೀ. ಓಟದಲ್ಲಿ 1 ಬೆಳ್ಳಿ, 200 ಮೀ. ಓಟದಲ್ಲಿ 1 ಕಂಚು, ಶ್ರೀದೇವಿ ಭಾರ ಎತ್ತುವಿಕೆ 2 ಚಿನ್ನ, ವಸಂತಿ ಭಾರ ಎತ್ತುವಲ್ಲಿ 1 ಬೆಳ್ಳಿ, ನಾಗರತ್ನ 100 ಮೀ. ಓಟದಲ್ಲಿ 1 ಕಂಚು.

ಅಗ್ನಿ ಶಾಮಕ ಇಲಾಖೆಯ ಅಶ್ವಿನ್ ಸನಿಲ್-ಭಾರ ಎತ್ತುವಲ್ಲಿ 2 ಚಿನ್ನ, 100 ಮೀ. ಓಟದಲ್ಲಿ 1 ಬೆಳ್ಳಿ. ತಾಂತ್ರಿಕ ಶಿಕ್ಷಣ ಇಲಾಖೆಯ ನಯನ ಪಿ ಬಿ ಭರತನಾಟ್ಯದಲ್ಲಿ ಚಿನ್ನ. ಆರೋಗ್ಯ ಇಲಾಖೆಯ ಉದಯ್ ಕುಮಾರ್ ಶೆಟ್ಟಿ 400 ಮೀ. ಓಟದಲ್ಲಿ ಚಿನ್ನ, ಪಲ್ಲವಿ ಭಾರ ಎತ್ತುವಿಕೆಯಲ್ಲಿ 2 ಬೆಳ್ಳಿ.

ಕಿರು ನಾಟಕ ಸ್ಪರ್ದೆಯಲ್ಲಿ ಶಿಕ್ಷಣ ಇಲಾಖೆಯ ರವಿ ಎಸ್ ಪೂಜಾರಿ ಇವರ ತಂಡವು ಬರ್ಬರೀಕ ನಾಟಕ ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದಿರುತ್ತದೆ. ಪ್ರಥಮ ಸ್ಥಾನ ಪಡೆದ ಎಲ್ಲಾ ಕ್ರೀಡಾಪಟುಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತ ಕ್ರೀಡಾಪಟುಗಳೊಂದಿಗೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...
error: Content is protected !!