ಕಾಪು, ಫೆ.10: ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರೊಂದಿಗೆ ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ ನಡೆಸಿ ಚರ್ಚಿಸಿದರು. ಬೇಸಿಗೆ ಸಮೀಪಿಸುತ್ತಿದ್ದು ಪುರಸಭಾ ವ್ಯಾಪ್ತಿಯ 25 ವಾರ್ಡಿನ ನಿವಾಸಿಗರಿಗೆ ಸಮರ್ಪಕವಾಗಿ ಕುಡಿಯವ ನೀರು ಸರಬರಾಜು ಮಾಡುವಂತೆ ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿ ವಾರ್ಡಿನ ಸದಸ್ಯರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳುವಂತೆ ಶಾಸಕರು ನಿರ್ದೇಶನ ನೀಡಿದರು.
ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ ಹಾಗೂ ಪುರಸಭೆಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




By
ForthFocus™