ಮಣಿಪಾಲ, ಫೆ.11: ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವ ಕುರಿತು ಸರ್ಕಾರ ಹೊರಡಿಸಿರುವ ಸುತ್ತೋಲೆ ಅಂಗವಾಗಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ಆವರಣದಲ್ಲಿ ಶ್ರೀ ಭಾರತಾಂಭೆ ಮಹಿಳಾ ಖಾದಿ ಗ್ರಾಮೋದ್ಯೋಗ ಕೈಗಾರಿಕಾ ಸಂಘ (ರಿ) ದಾವಣಗೆರೆ ಇವರು ತಯಾರಿಸಿದ ಖಾದಿ ಉಡುಪುಗಳ ಮಾರಾಟ ಮಳಿಗೆ ನಡೆಸುತ್ತಿದ್ದು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಭೇಟಿ ನೀಡಿ, ಉಡುಪುಗಳನ್ನು ವೀಕ್ಷಿಸಿದರು. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ವಿದ್ಯಾ, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಯು. ಆನಂದ ಜತ್ತನ್, ಕಾರ್ಯದರ್ಶಿ ನಿರ್ಮಲಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಖಾದಿ ಉಡುಪುಗಳ ಮಾರಾಟ ಮಳಿಗೆಗೆ ಅಪರ ಜಿಲ್ಲಾಧಿಕಾರಿ ಭೇಟಿ
ಖಾದಿ ಉಡುಪುಗಳ ಮಾರಾಟ ಮಳಿಗೆಗೆ ಅಪರ ಜಿಲ್ಲಾಧಿಕಾರಿ ಭೇಟಿ
Date:




By
ForthFocus™