Sunday, July 26, 2026
Sunday, July 26, 2026

ಮಾದಕ ವ್ಯಸನಕ್ಕೆ ಮೋಹಿತರಾಗಬೇಡಿ: ಡಾ. ಜಯಪ್ರಕಾಶ್‌ ಶೆಟ್ಟಿ

ಮಾದಕ ವ್ಯಸನಕ್ಕೆ ಮೋಹಿತರಾಗಬೇಡಿ: ಡಾ. ಜಯಪ್ರಕಾಶ್‌ ಶೆಟ್ಟಿ

Date:

ಹಿರಿಯಡಕ, ಫೆ.14: ಆರಂಭದ ಕುತೂಹಲ, ಅನಂತರದ ಹಂಬಲ, ಕೊನೆಗೆ ಬಿಟ್ಟಿರಲಾರದ ಚಪಲಕ್ಕೆ ತಳ್ಳಿ ನಿಮ್ಮನ್ನೇ ಆಪೋಶನ ತೆಗೆದುಕೊಳ್ಳುವ ಮಾದಕ ವಸ್ತುಗಳ ಮೋಹದ ಬಲೆಗೆ ಬೀಳದೆ ನಿಮ್ಮ ಬದುಕು ಮತ್ತು ಸಮಾಜವನ್ನು ಕಾಪಾಡುವ ಎಚ್ಚರವನ್ನು ಕಳೆದುಕೊಳ್ಳಬೇಡಿ ಎಂದು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಹೇಳಿದರು. ಇವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮಾದಕ ವ್ಯಸನ ತಡೆ ಸಮಿತಿ ಆಯೋಜಿಸಿದ ಮಾದಕ ವ್ಯಸನ ಜಾಗೃತಿ ಉಪನ್ಯಾಸ ಮತ್ತು ಸಾಕ್ಷ್ಯ ಚಿತ್ರ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾದಕ ವ್ಯಸನ ತಡೆ ಸಮಿತಿ ಸಂಚಾಲಕಿ ಅಪರ್ಣ ಕೆ ಯು ಕಾರ್ಯಕ್ರಮವನ್ನು ಸಂಯೋಜಿಸಿ ಸಾಕ್ಷ್ಯಚಿತ್ರದ ಆಶಯವನ್ನು ವಿವರಿಸಿದರು. ಮಾದಕ ವ್ಯಸನದ ದುಷ್ಪರಿಣಾಮಗಳನ್ನು ಕುರಿತಂತೆ ವಿದ್ಯಾರ್ಥಿಗಳಾದ ಈರಬಸು ಕುಂಬಾರ ಮತ್ತು ದಿವ್ಯಶ್ರೀ ಇವರುಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ., ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ ಎಂ., ರಾ.ಸೇ.ಯೋಜನಾಧಿಕಾರಿ ನಂದೀಶ್‌ ಕುಮಾರ್‌ ಕೆ ಸಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!