ಕಾಪು, ಫೆ.15: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ಮೂರು ದಿನಗಳ ಪರ್ಯಂತ ನಡೆಯಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ- ‘ಮಾತೃ ವೈಭವದ’ ಆಮಂತ್ರಣ ಪತ್ರಿಕೆಯನ್ನು ಫೆಬ್ರವರಿ 15 ರ ಭಾನುವಾರದಂದು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಹಾಗೂ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನಲ್ಲಿ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು.
ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಶ ತಂತ್ರಿ, ಶ್ರೀ ಹೊಸ ಮಾರಿಗುಡಿ ದೇವಳದ ಪ್ರಧಾನ ಅರ್ಚಕರಾದ ಕಲ್ಯ ವೇದಮೂರ್ತಿ ಶ್ರೀನಿವಾಸ ತಂತ್ರಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಮತ್ತು ಮಾತೃ ವೈಭವ ಸೇವಾ ಸಮಿತಿಯ ಅಧ್ಯಕ್ಷರಾದ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮಾತೃ ವೈಭವ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಯೋಗೀಶ್ ವಿ. ಶೆಟ್ಟಿ, ಕಾರ್ಯದರ್ಶಿ ಜಯರಾಮ್ ಆಚಾರ್ಯ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಾಧವ ಪಾಲನ್, ಶೇಖರ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™