Saturday, June 13, 2026
Saturday, June 13, 2026

ಬ್ರಹ್ಮಾವರ: ಅಂತರ್ ಜಿಲ್ಲಾ ಹಿರಿಯರ ಟೆನಿಸ್ ಪಂದ್ಯಾಟ ಉದ್ಘಾಟನೆ

ಬ್ರಹ್ಮಾವರ: ಅಂತರ್ ಜಿಲ್ಲಾ ಹಿರಿಯರ ಟೆನಿಸ್ ಪಂದ್ಯಾಟ ಉದ್ಘಾಟನೆ

Date:

ಬ್ರಹ್ಮಾವರ, ಫೆ.15: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಬೈಕಾಡಿ ಸಾಲ್ವದೋರ್ ನೊರೋನ್ಹ ಅವರ ಸ್ಮರಣಾರ್ಥ 16ನೇ ಪುರುಷರ ಅಂತರ್ ಜಿಲ್ಲಾ ಟೆನ್ನಿಸ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ಪಶುಪಾಲನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಾ. ಮಹೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಪಂದ್ಯದಲ್ಲಿ ಸೋತರೂ ಕೂಡ ಧ್ರತಿಗೆಡದೆ ತನ್ನ ನ್ಯೂನತೆಯ ಬಗ್ಗೆ ತಿಳಿದುಕೊಂಡು ಮುಂದೆ ಗೆಲುವಿನತ್ತ ತನ್ನ ಚಿತ್ತವನ್ನು ಹರಿಸಬೇಕು ಎಂದು ಕರೆ ನೀಡಿದರು.

ಸ್ಪೋರ್ಟ್ಸ್ ಕ್ಲಬ್ಬಿನಲ್ಲಿ ಕ್ರೀಡಾಪಟುಗಳಿಗೆ ಇರುವ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿದರು. ಇನ್ನೋರ್ವ ಅತಿಥಿ ಉದ್ಯಮಿ ಪ್ರಭಾಕರ್ ಕುಂದರ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಗೌರವಾಧ್ಯಕ್ಷರಾದ ಎಂ. ಚಂದ್ರಶೇಖರ್ ಹೆಗ್ಡೆ ಪ್ರಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ಬಿಜು ಜಿ ನಾಯರ್ ಸ್ವಾಗತಿಸಿ, ಕಾರ್ಯದರ್ಶಿ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!