Sunday, March 29, 2026
Sunday, March 29, 2026

ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ

ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ

Date:

ಉಡುಪಿ, ಫೆ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು, ಆಯುಷ್ಮಾನ್ ಆರೋಗ್ಯ ಕೇಂದ್ರ ಮಲ್ಲಾರ್, ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಎನ್.ಸಿ.ಡಿ ಘಟಕ ಹಾಗೂ ಪುರಸಭೆ ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಮಲ್ಲಾರ್ ಫಕೀರ್ನಕಟ್ಟೆ ಶ್ರೀ ನಾರಾಯಣಗುರು ಬಿಲ್ಲವ ಸಂಘದಲ್ಲಿ ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ ನಡೆಯಿತು. ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ಡಾ. ಪ್ರೇಮ್ ಕಣ್ಣಿನ ಆರೋಗ್ಯ ಕುರಿತು ಮಾಹಿತಿ ನೀಡಿದರು.

ಪುರಸಭೆ ಸದಸ್ಯರಾದ ನೂರುದ್ದೀನ್, ಶೈಲೇಶ್, ಎನ್.ಸಿ.ಡಿ ವೈದ್ಯಾಧಿಕಾರಿ ಡಾ.ದೀಕ್ಷಾ, ಸಂಯೋಜಕರಾದ ಹರ್ಷ, ಮಾಸ್ಟರ್ ಮಲ್ಲಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿರ್ಮಲಾ ಮೆಂಡನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿ, ಸಮುದಾಯ ಆರೋಗ್ಯಾಧಿಕಾರಿ ಶೆರೋನ್, ಆರೋಗ್ಯ ನಿರೀಕ್ಷಣಾಧಿಕಾರಿ ಭವ್ಯಶ್ರಿ, ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಎನ್.ಸಿ.ಡಿ ಘಟಕದ ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ನವದೆಹಲಿ, ಮಾ.28: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೋಯ್ಡಾದ ಜೇವರ್‌ನಲ್ಲಿ...

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!